ದೇಶ- ವಿದೇಶ

ಕೈಲಾಸ ಮಾನಸ ಸರೋವರ ಯಾತ್ರೆ ಪುನರಾರಂಭ

 

ನವದೆಹಲಿ: ಕೊರೊನಾ ವೈರಸ್ ಪರಿಣಾಮದಿಂದಾಗಿ ಸರಿಸುಮಾರು ಕಳೆದ ಐದು ವರ್ಷಗಳಿಂದ ನಿಂತು ಹೋಗಿದ್ದ ಕೈಲಾಸ ಮಾನಸ ಸರೋವರ ಯಾತ್ರೆ ಇದೀಗ ಮತ್ತೆ ಜೂನ್.30 ರಿಂದ ಪುನರಾರಂಭವಾಗಲಿದೆ.

ಉತ್ತರಾಖಂಡ ಸರ್ಕಾರ ಮತ್ತು ಭಾರತೀಯ ವಿದೇಶಾಂಗ ಸಚಿವಾಲಯದ ಆಶ್ರಯದಲ್ಲಿ ಯಾತ್ರೆಯ ಕುರಿತು ನಡೆದ ಸಭೆಯಲ್ಲಿ, ತೀರ್ಥಯಾತ್ರೆಯನ್ನು ಪುನರಾರಂಭಿಸುವ ಬಗ್ಗೆ ಚರ್ಚಿಸಲಾಗಿದೆ ಎಂದು ವರದಿಯಾಗಿದೆ.

ಕೈಲಾಸ ಮಾನಸ ಸರೋವರ ಯಾತ್ರೆಯು ಉತ್ತರಾಖಂಡದ ಪಿಥೋರಗಢ ಜಿಲ್ಲೆಯಲ್ಲಿ 17,000 ಅಡಿ ಎತ್ತರದಲ್ಲಿರುವ ಲಿಪುಲೇಖ್ ಪಾಸ್ ಮೂಲಕ ಹಾದು ಹೋಗಲಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸ ಪರ್ವತವು ಶಿವನ ವಾಸಸ್ಥಾನವಾಗಿದ್ದು, ಅದನ್ನು ಪ್ರದಕ್ಷಿಣೆ ಹಾಕಿ ಮಾನಸ ಸರೋವರದಲ್ಲಿ ಸ್ನಾನ ಮಾಡುವುದರಿಂದ ಮೋಕ್ಷ ಸಿಗುತ್ತದೆ ಎಂದು ನಂಬಲಾಗಿದೆ.

ಪ್ರತಿ ವರ್ಷ ಆಯೋಜಿಸಲಾಗುತ್ತಿದ್ದ ಈ ಯಾತ್ರೆಯನ್ನು 2020ರಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಮುಂದೂಡಲಾಗಿತ್ತು. ಅಂದಿನಿಂದ ಅದನ್ನು ನಡೆಸಲು ಸಾಧ್ಯವಾಗಲಿಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಪ್ರಯತ್ನದಿಂದಾಗಿ ಈ ವರ್ಷ ಯಾತ್ರೆ ಪುನರಾರಂಭಿಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಜೂನ್.30ರಂದು ದೆಹಲಿಯಿಂದ ಯಾತ್ರೆ ಪ್ರಾರಂಭವಾಗಲಿದ್ದು, ತಲಾ 50 ಜನರ ಐದು ಗುಂಪುಗಳಿದ್ದು, ಒಟ್ಟು 250 ಭಕ್ತರು ಭಾಗವಹಿಸಲಿದ್ದಾರೆ. ಕೈಲಾಸ ಮಾನಸ ಸರೋವರ ಯಾತ್ರೆಯ ಮೊದಲ ಗುಂಪು ಜುಲೈ.10 ರಂದು ಲಿಪುಲೇಖ್ ಪಾಸ್ ಮೂಲಕ ಚೀನಾವನ್ನು ಪ್ರವೇಶಿಸಲಿದ್ದು, ಕೊನೆಯ ಗುಂಪು ಆಗಸ್ಟ್.22ರಂದು ಚೀನಾದಿಂದ ಭಾರತಕ್ಕೆ ತೆರಳಲಿದೆ.

ಪ್ರತಿ ತಂಡವು ದೆಹಲಿಯಿಂದ ಹೊರಟು ಉತ್ತರಾಖಂಡದ ಚಂಪಾವತ್ ಜಿಲ್ಲೆಯ ತನಕಪುರದಲ್ಲಿ ಒಂದು ರಾತ್ರಿ, ಪಿಥೋರಗಢ ಜಿಲ್ಲೆಯ ಧಾರ್ಚುಲಾದಲ್ಲಿ ಒಂದು ರಾತ್ರಿ, ಗುಂಜಿಯಲ್ಲಿ ಎರಡು ರಾತ್ರಿ ಮತ್ತು ನಭಿದಂಗ್‍ನಲ್ಲಿ ಎರಡು ರಾತ್ರಿ ತಂಗುವ ಮೂಲಕ ಚೀನಾದ ತಕ್ಲಕೋಟ್‍ಗೆ ಪ್ರವೇಶಿಸಲಿದೆ.

ಕೈಲಾಸಕ್ಕೆ ಭೇಟಿ ನೀಡಿದ ನಂತರ, ಪ್ರಯಾಣಿಕರು ಚೀನಾದಿಂದ ಹೊರಟು ಪಿಥೋರಗಢ ಜಿಲ್ಲೆಯ ಬುಂಡಿಯಲ್ಲಿ ಒಂದು ರಾತ್ರಿ, ಚೌಕೋರಿಯಲ್ಲಿ ಒಂದು ರಾತ್ರಿ ಮತ್ತು ಅಲ್ಮೋರಾದಲ್ಲಿ ಒಂದು ರಾತ್ರಿ ತಂಗುವ ಮೂಲಕ ದೆಹಲಿ ತಲುಪಲಿದ್ದಾರೆ. ಹೀಗಾಗಿ, ಪ್ರತಿ ತಂಡವು ಒಟ್ಟು 22 ದಿನಗಳವರೆಗೆ ಪ್ರಯಾಣಿಸುತ್ತದೆ. ಕೈಲಾಸ ಮಾನಸ ಸರೋವರ ಯಾತ್ರೆಗೆ ಹೋಗುವ ಎಲ್ಲಾ ಯಾತ್ರಿಕರ ಆರೋಗ್ಯ ತಪಾಸಣೆಯನ್ನು ಮೊದಲು ದೆಹಲಿಯಲ್ಲಿ ಮತ್ತು ನಂತರ ಗುಂಜಿಯಲ್ಲಿ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

9 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

12 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

14 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

14 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

14 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

14 hours ago