ಹೊಸದಿಲ್ಲಿ : 75 ವರ್ಷಕ್ಕೆ ನಿವೃತ್ತಿ ಕಡ್ಡಾಯವಲ್ಲ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ನಿವೃತ್ತಿ ಚರ್ಚೆಗೆ ಆರ್ಎಸ್ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ತೆರೆ ಎಳೆದಿದ್ದಾರೆ.
ಸೆಪ್ಟೆಂಬರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 75ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಹಾಗೆಯೇ 75ನೇ ವಯಸ್ಸಿನಲ್ಲೇ ನಿವೃತ್ತಿ ಘೋಷಿಸಲಿದ್ದಾರೆ ಎನ್ನುವ ಚರ್ಚೆ ಎದ್ದಿತ್ತು. ಇದೀಗ ಎಲ್ಲಾ ಊಹಾಪೋಹಗಳಿಗೆ ಮೋಹನ್ ಭಾಗವತ್ ತೆರೆ ಎಳೆದಿದ್ದಾರೆ. ಸ್ವತಃ ಭಾಗವತ್ ಅವರು ಸೆಪ್ಟೆಂಬರ್ನಲ್ಲಿ ಪ್ರಧಾನಿ ಮೋದಿಯವರಿಗಿಂತ ಆರು ದಿನ ಮುಂಚಿತವಾಗಿ 75ನೇ ವಯಸ್ಸಿಗೆ ಕಾಲಿಡುತ್ತಿದ್ದಾರೆ.
75 ವರ್ಷವಾದಾಗ ನಾನು ನಿವೃತ್ತಿಯಾಗುತ್ತೇನೆ ಅಥವಾ ಬೇರೆಯವರು ನಿವೃತ್ತಿಯಾಗಬೇಕು ಎಂದು ನಾನು ಎಂದಿಗೂ ಹೇಳಿಲ್ಲ ಎಂದು ಹೇಳಿದ್ದಾರೆ. ಆರ್ಎಸ್ಎಸ್ನ ಮುಖ್ಯಸ್ಥ ಮೋಹನ್ ಭಾಗವತ್ ಅವರು ಇತ್ತೀಚೆಗೆ ನಡೆದ ಒಂದು ಸಮಾರಂಭದಲ್ಲಿ ಮಾತನಾಡಿ, 75 ವರ್ಷ ವಯೋಮಿತಿಯ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ತೆರೆ ಎಳೆದಿದ್ದಾರೆ.
ಅವರು ತಮ್ಮ ನಿವೃತ್ತಿಯ ಬಗ್ಗೆ ಸ್ಪಷ್ಟನೆ ನೀಡುತ್ತಾ, ತಾವು ನಿವೃತ್ತಿಯಾಗುವುದಿಲ್ಲ ಮತ್ತು ಯಾರಿಗೂ ನಿವೃತ್ತಿಯಾಗಲು ಹೇಳಿಲ್ಲ ಎಂದು ಹೇಳಿದರು. ಈ ಹೇಳಿಕೆಯ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೆಳಗಿಳಿಸುವ ಯಾವುದೇ ಯೋಜನೆ ಇಲ್ಲ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ.
ಭಾಗವತ್ ಅವರು ಆರ್ಎಸ್ಎಸ್ನ ಶತಮಾನೋತ್ಸವದ ಸಮಾರಂಭದಲ್ಲಿ ಮಾತನಾಡುತ್ತಾ, ಬಿಜೆಪಿ ಮತ್ತು ಆರ್ಎಸ್ಎಸ್ ನಡುವೆ ಭಿನ್ನಾಭಿಪ್ರಾಯಗಳು ಇರಬಹುದು ಆದರೆ ಸಂಘರ್ಷ ಇಲ್ಲ ಎಂದು ಹೇಳಿದರು. ಎರಡೂ ಸಂಘಟನೆಗಳು ದೇಶದ ಅಭಿವೃದ್ಧಿಗೆ ಕೆಲಸ ಮಾಡುತ್ತಿವೆ ಎಂದು ಅವರು ಸ್ಪಷ್ಟಪಡಿಸಿದರು.
ಜನಸಂಖ್ಯಾ ಅಸಮತೋಲನದ ಬಗ್ಗೆ ಮಾತನಾಡಿದ ಭಾಗವತ್ ಅವರು, ಮತಾಂತರ ಮತ್ತು ಅಕ್ರಮ ವಲಸೆಯು ಇದಕ್ಕೆ ಕಾರಣವಾಗಿದೆ ಎಂದು ಹೇಳಿದರು. ಭಾರತೀಯ ದಂಪತಿ ಮೂರು ಮಕ್ಕಳನ್ನು ಹೆರುವಂತೆ ಅವರು ಕರೆ ನೀಡಿದರು. ಇದು ದೇಶದ ಜನಸಂಖ್ಯಾ ಸಮತೋಲನವನ್ನು ಕಾಯ್ದುಕೊಳ್ಳಲು ಸಹಾಯ ಮಾಡುತ್ತದೆ ಎಂದು ಅವರು ಅಭಿಪ್ರಾಯಿಸಿದ್ದಾರೆ.
ಮೋಹನ್ ಭಾಗವತ್ ಅವರ ಈ ಹೇಳಿಕೆಗಳು ರಾಜಕೀಯ ವಲಯದಲ್ಲಿ ವಿವಿಧ ಪ್ರತಿಕ್ರಿಯೆಗಳನ್ನು ಉಂಟುಮಾಡಿದೆ. ಕೆಲವರು ಅವರ ಹೇಳಿಕೆಗಳನ್ನು ಸ್ವಾಗತಿಸಿದರೆ, ಇನ್ನು ಕೆಲವರು ಅವುಗಳನ್ನು ಟೀಕಿಸಿದ್ದಾರೆ. ಆದಾಗ್ಯೂ, ಭಾಗವತ್ ಅವರ ಹೇಳಿಕೆಗಳು 75 ವರ್ಷದ ವಯೋಮಿತಿಯ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ತೆರೆ ಎಳೆದಿವೆ ಎಂಬುದು ಸ್ಪಷ್ಟವಾಗಿದೆ.
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…
ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…
ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್…