ದೇಶ- ವಿದೇಶ

ಆರ್‌.ಜಿ.ಕರ್‌ ಪ್ರಕರಣ: ಸಂಜಯ್‌ ರಾಯ್‌ಗೆ ಗಲ್ಲು ಶಿಕ್ಷೆ ಕೋರಿ ಹೈಕೋರ್ಟ್‌ಗೆ ಸಲ್ಲಿಕೆ: ಸಿಬಿಐ

ಕೋಲ್ಕತ್ತ: ಇಲ್ಲಿನ ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯ ಆತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸಂಜಯ್‌ ರಾಯ್‌ಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಕೋರಿ ಕೋಲ್ಕತ್ತ ಹೈಕೋರ್ಟ್‌ಗೆ ಸಿಬಿಐ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿಯನ್ನು ಇಂದು(ಜನವರಿ.24) ವಿಚಾರಣೆ ನಡೆಸಿದ ಹೈಕೋರ್ಟ್‌ನ ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ದೇಬಾಂಗ್ಶು ಬಸಕ್‌ ಹಾಗೂ ಮೊಹಮ್ಮದ್‌ ಶಬ್ಬರ್‌ ರಶಿದಿ ಅವರಿದ್ದ ಪೀಠವೂ ಈ ಅರ್ಜಿ ವಿಚಾರಣೆಯನ್ನು ಜ.27ಕ್ಕೆ ಮುಂದೂಡಲಾಗಿದೆ ಎಂದು ಆದೇಶ ಹೊರಡಿಸಿದೆ.

ಇನ್ನೂ ಪಶ್ಚಿಮ ಬಂಗಾಳ ಸರ್ಕಾರವೂ ಇಂತಹದ್ದೇ ಒಂದು ಮನವಿಯನ್ನು ಸಲ್ಲಿಸಿದ್ದು, ಈ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟಿಗೆ ವಿಚಾರಣೆ ನಡೆಸುವುದಾಗಿ ಹೇಳಿದೆ. ಅಲ್ಲದೇ ಪ್ರಕರಣದ ತನಿಖೆ ನಡೆಸಿದ ನಮಗೆ, ವಿಧಿಸಿದ ಶಿಕ್ಷೆಯ ಅಸಮರ್ಪಕತೆಯ ಆಧಾರದ ಮೇಲೆ ಕೆಳ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸುವ ಹಕ್ಕಿದೆ ಎಂದು ಹೇಳಿದೆ.

ಅರ್ಚನ ಎಸ್‌ ಎಸ್

Recent Posts

ಸುವರ್ಣಸೌಧದಲ್ಲಿ ನಾಟಿ ಕೋಳಿ ಬಗ್ಗೆ ಸ್ವಾರಸ್ಯಕರ ಚರ್ಚೆ..!

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ…

8 mins ago

ಯುವನಿಧಿ | 2.84 ಲಕ್ಷ ಮಂದಿಗೆ 757 ಕೋಟಿ ರೂ.ಆರ್ಥಿಕ ನೆರವು

ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…

26 mins ago

ಕೇಬಲ್‌ ಟಿವಿ ಆಪರೇಟರ್‌ ಶುಲ್ಕ ಶೇ.50 ರಷ್ಟು ಕಡಿತ : ಕೆ.ಜೆ.ಜಾರ್ಜ್‌

ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…

51 mins ago

ಅನಗತ್ಯ ಸಿಜೇರಿಯನ್‌ ಹೆರಿಗೆ : ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಖಚಿತ

ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…

2 hours ago

ಚಿಕ್ಕಮಗಳೂರಲ್ಲಿ ಮತ್ತೊಮ್ಮೆ ಹೆಲಿ ಟೂರಿಸಂಗೆ ನಿರ್ಧಾರ : ಪರಿಸರ ಸಂಘಟನೆಗಳಿಂದ ತೀವ್ರ ವಿರೋಧ

ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…

2 hours ago

ಇತಿಹಾಸ ತಿರುಚಲು ಮೋದಿ ಯತ್ನ : ಗೌರವ್‌ ಗೊಗೊಯ್‌ ಆರೋಪ

ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…

2 hours ago