ಕೋಲ್ಕತ್ತ: ಇಲ್ಲಿನ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯ ಆತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸಂಜಯ್ ರಾಯ್ಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಕೋರಿ ಕೋಲ್ಕತ್ತ ಹೈಕೋರ್ಟ್ಗೆ ಸಿಬಿಐ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿಯನ್ನು ಇಂದು(ಜನವರಿ.24) ವಿಚಾರಣೆ ನಡೆಸಿದ ಹೈಕೋರ್ಟ್ನ ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ದೇಬಾಂಗ್ಶು ಬಸಕ್ ಹಾಗೂ ಮೊಹಮ್ಮದ್ ಶಬ್ಬರ್ ರಶಿದಿ ಅವರಿದ್ದ ಪೀಠವೂ ಈ ಅರ್ಜಿ ವಿಚಾರಣೆಯನ್ನು ಜ.27ಕ್ಕೆ ಮುಂದೂಡಲಾಗಿದೆ ಎಂದು ಆದೇಶ ಹೊರಡಿಸಿದೆ.
ಇನ್ನೂ ಪಶ್ಚಿಮ ಬಂಗಾಳ ಸರ್ಕಾರವೂ ಇಂತಹದ್ದೇ ಒಂದು ಮನವಿಯನ್ನು ಸಲ್ಲಿಸಿದ್ದು, ಈ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟಿಗೆ ವಿಚಾರಣೆ ನಡೆಸುವುದಾಗಿ ಹೇಳಿದೆ. ಅಲ್ಲದೇ ಪ್ರಕರಣದ ತನಿಖೆ ನಡೆಸಿದ ನಮಗೆ, ವಿಧಿಸಿದ ಶಿಕ್ಷೆಯ ಅಸಮರ್ಪಕತೆಯ ಆಧಾರದ ಮೇಲೆ ಕೆಳ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸುವ ಹಕ್ಕಿದೆ ಎಂದು ಹೇಳಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…