500 ರೂ.ನಕಲಿ ನೋಟುಗಳ ಸಂಖ್ಯೆ ಏರಿಕೆ: ಕೇಂದ್ರದ ದತ್ತಾಂಶ

ಹೊಸದಿಲ್ಲಿ: 2018-19 ಹಾಗೂ 2022-23ನೇ ಸಾಲಿನ ನಡುವೆ ಪತ್ತೆಹಚ್ಚಲಾದ 500ರೂ. ಮುಖಬೆಲೆಯ ನಕಲಿ ನೋಟುಗಳ ಸಂಖ್ಯೆಯಲ್ಲಿ ಶೇ.317ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಸರ್ಕಾರವು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದ ದತ್ತಾಂಶದಲ್ಲಿ ಹೇಳಿದೆ.

2018-19 ನೇ ಸಾಲಿನಲ್ಲಿ 500 ರೂ ಮುಖಬೆಲೆಯ 2186.5 ಕೋಟಿ ನಕಲಿ ನೋಟುಗಳು ದೇಶದಾದ್ಯಂತ ಪತ್ತೆಯಾಗಿದ್ದವು. ಇದಕ್ಕೆ ಹೋಲಿಸಿದರೆ 2022-23 ನೇ ಸಾಲಿನಲ್ಲಿ 500 ರೂ ಮುಖಬೆಲೆಯ 9,111 ನಕಲಿ ನೋಟುಗಳು ದೇಶದಲ್ಲಿ ಪತ್ತೆಯಾಗಿದ್ದು, ಹಿಂದಿನ ಸಾಲಿಗೆ ಹೋಲಿಸಿದರೆ ಶೇ. 316.6 ರಷ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಸಹಾಯಕ ವಿತ್ತ ಸಚಿವ ಪಂಕಚ್ಚೌಧರಿ ಲೋಕಸಭೆಗೆ ತಿಳಿಸಿದರು.

ಈ ಕುರಿತು ಡಿಎಂಕೆ ಸಂಸದ ಟಿ. ಎಂ. ಸೆಲ್ವಗಣಪತಿ ಅವರು ಮಂಗಳವಾರ ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಗೆ ಹಣಕಾಸು ಸಚಿವಾಲಯವು ಈ ದತ್ತಾಂಶಗಳನ್ನು ಬಹಿರಂಗಪಡಿಸಿದೆ.

ಆದರೆ 2023-24ನೇ ಸಾಲಿನಲ್ಲಿ 500 ರೂ ಮುಖಬೆಲೆಯ ನೋಟುಗಳ ಸಂಖ್ಯೆಯು 85,711ಕ್ಕೆ ಕುಸಿದಿದೆ ಎಂದು ಸಚಿವಾಲಯ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

43 mins ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

4 hours ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

6 hours ago

ವಿರಾಜಪೇಟೆ | ಅವಘಡಕ್ಕಾಗಿ ಕಾಯುತ್ತಿದೆ ಮಾರುಕಟ್ಟೆ ಹಳೇ ಕಟ್ಟಡ..!

ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…

6 hours ago

ಗುಂಡ್ಲುಪೇಟೆ | ಶಿಥಿಲಗೊಂಡಿರುವ ಅಂಗನವಾಡಿ, ಶಾಲೆ ಕಟ್ಟಡಗಳು

ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…

6 hours ago