ಮೈಸೂರು: ಕಾರು ಅಪಘಾತಕ್ಕೊಳಗಾಗಿದ್ದ ಕ್ರಿಕೆಟಿಗ ರಿಷಬ್ ಪಂತ್ ಅವರನ್ನು ಆಸ್ಪತ್ರೆಗೆ ಸೇರಿಸಲು ನೆರವಾದ ಹರಿಯಾಣ ರೋಡ್ ವೇಸ್ ಸಾರಿಗೆ ಬಸ್ ಚಾಲಕ ಮತ್ತು ನಿರ್ವಾಹಕ ಮತ್ತು ಕೆಲವು ಸ್ಥಳೀಯರನ್ನು ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ಗೌರವಿಸಿ ಸನ್ಮಾನಿಸಿದ್ದಾರೆ.
ಕ್ರಿಕೆಟಿಗ ರಿಷಭ್ ಪಂತ್ ಡಿಸೆಂಬರ್ 30 ರಂದು ದೆಹಲಿಯಿಂದ ರೂರ್ಕಿಗೆ ಹಿಂದಿರುಗುತ್ತಿದ್ದಾಗ ಭೀಕರ ಅಪಘಾತಕ್ಕೊಳಗಾದರು. ಹಮ್ಮದ್ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಪಂತ್ ಅವರ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದಿತ್ತು. ಬೆಂಕಿ ಹೊತ್ತಿಕೊಂಡಿದ್ದ ಕಾರಿನಿಂದ ಮುಂಭಾಗದ ಗಾಜು ಒಡೆದು ಪಂತ್ ಹೊರಗೆ ಬಂದಿದ್ದಾರೆ. ನಂತರ ರಸ್ತೆ ಪಕ್ಕದಲ್ಲಿ ಬಿದ್ದು ನೋವಿನಿಂದ ನರಳುತ್ತಿದ್ದ ಪಂತ್ ಅವರನ್ನು ಹರಿಯಾಣ ರೋಡ್ ವೇಸ್ ನ ಚಾಲಕ ಸುಶೀಲ್ ಕುಮಾರ್ ಮತ್ತು ನಿರ್ವಾಹಕ ಪರಮ್ಜಿತ್ ಸಿಂಗ್ ರಕ್ಷಿಸಿ ಆಂಬುಲೆನ್ಸ್ ಕರೆಸಿ ಆಸ್ಪತ್ರೆಗೆ ಸೇರಿಸಲು ನೆರವಾಗಿದ್ದರು. ಉತ್ತರಾಖಂಡದ ಡಿಜಿಪಿ ಅಶೋಕ್ ಕುಮಾರ್ ಅವರು ಈ ಇಬ್ಬರನ್ನು ಕರೆದು ನಗದು ಪುರಸ್ಕಾರವಿತ್ತು ಗೌರವಿಸಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…