ದೇಶ- ವಿದೇಶ

ರಿಷಬ್ ಪಂತ್ ಜೀವ ಉಳಿಸಿದ ಜನರಿಗೆ ಪೊಲೀಸರಿಂದ ಸನ್ಮಾನ

ಮೈಸೂರು: ಕಾರು ಅಪಘಾತಕ್ಕೊಳಗಾಗಿದ್ದ ಕ್ರಿಕೆಟಿಗ ರಿಷಬ್ ಪಂತ್ ಅವರನ್ನು ಆಸ್ಪತ್ರೆಗೆ ಸೇರಿಸಲು ನೆರವಾದ ಹರಿಯಾಣ ರೋಡ್ ವೇಸ್ ಸಾರಿಗೆ ಬಸ್ ಚಾಲಕ ಮತ್ತು ನಿರ್ವಾಹಕ ಮತ್ತು ಕೆಲವು ಸ್ಥಳೀಯರನ್ನು ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ಗೌರವಿಸಿ ಸನ್ಮಾನಿಸಿದ್ದಾರೆ.

ಕ್ರಿಕೆಟಿಗ ರಿಷಭ್ ಪಂತ್ ಡಿಸೆಂಬರ್ 30 ರಂದು ದೆಹಲಿಯಿಂದ ರೂರ್ಕಿಗೆ ಹಿಂದಿರುಗುತ್ತಿದ್ದಾಗ ಭೀಕರ ಅಪಘಾತಕ್ಕೊಳಗಾದರು. ಹಮ್ಮದ್ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಪಂತ್ ಅವರ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದಿತ್ತು. ಬೆಂಕಿ ಹೊತ್ತಿಕೊಂಡಿದ್ದ ಕಾರಿನಿಂದ ಮುಂಭಾಗದ ಗಾಜು ಒಡೆದು ಪಂತ್ ಹೊರಗೆ ಬಂದಿದ್ದಾರೆ. ನಂತರ ರಸ್ತೆ ಪಕ್ಕದಲ್ಲಿ ಬಿದ್ದು ನೋವಿನಿಂದ ನರಳುತ್ತಿದ್ದ ಪಂತ್ ಅವರನ್ನು ಹರಿಯಾಣ ರೋಡ್‌ ವೇಸ್ ನ ಚಾಲಕ ಸುಶೀಲ್‌ ಕುಮಾರ್ ಮತ್ತು ನಿರ್ವಾಹಕ ಪರಮ್ಜಿತ್‌ ಸಿಂಗ್ ರಕ್ಷಿಸಿ ಆಂಬುಲೆನ್ಸ್‌ ಕರೆಸಿ ಆಸ್ಪತ್ರೆಗೆ ಸೇರಿಸಲು ನೆರವಾಗಿದ್ದರು. ಉತ್ತರಾಖಂಡದ ಡಿಜಿಪಿ ಅಶೋಕ್ ಕುಮಾರ್ ಅವರು ಈ ಇಬ್ಬರನ್ನು ಕರೆದು ನಗದು ಪುರಸ್ಕಾರವಿತ್ತು ಗೌರವಿಸಿದ್ದಾರೆ.

andolana

Recent Posts

ಮಳೆ ಕೊರತೆ ನಡುವೆಯೂ ತರಕಾರಿ ಅಗ್ಗ

ದಿನೇಶ್ ಕುಮಾರ್ ಎಚ್.ಎಸ್. ಮೈಸೂರು: ಮಳೆ ಕೊರತೆಯಿಂದ ಬರ ಪರಿಸ್ಥಿತಿ ನಡುವೆಯೂ ಕೆಂಪು ಸುಂದರಿ ಟೊಮ್ಯಾಟೋ ಬೆಲೆ ಪಾತಾಳಕ್ಕಿಳಿದಿದೆ. ಕಳೆದ…

1 min ago

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

10 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

12 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

20 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

20 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

20 hours ago