ಮೈಸೂರು: ಕಾರು ಅಪಘಾತಕ್ಕೊಳಗಾಗಿದ್ದ ಕ್ರಿಕೆಟಿಗ ರಿಷಬ್ ಪಂತ್ ಅವರನ್ನು ಆಸ್ಪತ್ರೆಗೆ ಸೇರಿಸಲು ನೆರವಾದ ಹರಿಯಾಣ ರೋಡ್ ವೇಸ್ ಸಾರಿಗೆ ಬಸ್ ಚಾಲಕ ಮತ್ತು ನಿರ್ವಾಹಕ ಮತ್ತು ಕೆಲವು ಸ್ಥಳೀಯರನ್ನು ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ಗೌರವಿಸಿ ಸನ್ಮಾನಿಸಿದ್ದಾರೆ.
ಕ್ರಿಕೆಟಿಗ ರಿಷಭ್ ಪಂತ್ ಡಿಸೆಂಬರ್ 30 ರಂದು ದೆಹಲಿಯಿಂದ ರೂರ್ಕಿಗೆ ಹಿಂದಿರುಗುತ್ತಿದ್ದಾಗ ಭೀಕರ ಅಪಘಾತಕ್ಕೊಳಗಾದರು. ಹಮ್ಮದ್ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಪಂತ್ ಅವರ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದಿತ್ತು. ಬೆಂಕಿ ಹೊತ್ತಿಕೊಂಡಿದ್ದ ಕಾರಿನಿಂದ ಮುಂಭಾಗದ ಗಾಜು ಒಡೆದು ಪಂತ್ ಹೊರಗೆ ಬಂದಿದ್ದಾರೆ. ನಂತರ ರಸ್ತೆ ಪಕ್ಕದಲ್ಲಿ ಬಿದ್ದು ನೋವಿನಿಂದ ನರಳುತ್ತಿದ್ದ ಪಂತ್ ಅವರನ್ನು ಹರಿಯಾಣ ರೋಡ್ ವೇಸ್ ನ ಚಾಲಕ ಸುಶೀಲ್ ಕುಮಾರ್ ಮತ್ತು ನಿರ್ವಾಹಕ ಪರಮ್ಜಿತ್ ಸಿಂಗ್ ರಕ್ಷಿಸಿ ಆಂಬುಲೆನ್ಸ್ ಕರೆಸಿ ಆಸ್ಪತ್ರೆಗೆ ಸೇರಿಸಲು ನೆರವಾಗಿದ್ದರು. ಉತ್ತರಾಖಂಡದ ಡಿಜಿಪಿ ಅಶೋಕ್ ಕುಮಾರ್ ಅವರು ಈ ಇಬ್ಬರನ್ನು ಕರೆದು ನಗದು ಪುರಸ್ಕಾರವಿತ್ತು ಗೌರವಿಸಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…