ವಯನಾಡು: ಲೋಕಸಭೆ ಚುನಾವಣೆ ಘೋಷಣೆಯಾದ ಬಳಿಕ ಎರಡನೇ ಬಾರಿಗೆ ತಮ್ಮ ಸಂಸದೀಯ ಸ್ವಕ್ಷೇತ್ರವಾದ ಕೇರಳದ ವಯನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.
ಸೋಮವಾರ ಸುಲ್ತಾನ್ ಬತೇರಿಯ ಪ್ರದೇಶದಲ್ಲಿ ಕಾರಿನ ಮೇಲೆ ಕುಳಿತು ರಾಹುಲ್ ಗಾಂಧಿ ರೋಡ್ ಶೋ ನಡೆಸಿ, ರಸ್ತೆಯ ಇಕ್ಕೆಲಗಳಲ್ಲಿ ನೆರೆದಿಂದ ಸಾವಿರಾರು ಕಾರ್ಯಕರ್ತರತ್ತ ಕೈಬೀಸಿ ಮುಂದೆ ಸಾಗಿದರು.
ಇದಕ್ಕೂ ಮೊದಲು ತಮಿಳುನಾಡಿನ ಗಡಿಭಾಗದ ನೀಲಗಿರಿ ಜಿಲ್ಲೆಗೆ ತೆರಳಿ, ಅಲ್ಲಿನ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ರಾಹುಲ್ ಗಾಂಧಿ ಹೆಲಿಕಾಪ್ಟರ್ ತಪಾಸಣೆ ಮಾಡಿದ ಚುನಾವಣಾ ಅಧಿಕಾರಿಗಳು
ತಮಿಳುನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಅನ್ನು ಚುನಾವಣಾ ಅಧಿಕಾರಿಗಳು ಸೋಮವಾರ ತಪಾಸಣೆ ನಡೆಸಿದರು.
ಕೇರಳದ ವಯನಾಡ್ಗೆ ತೆರಳುವ ಮುನ್ನ ನೀಲಿಗಿರಿಗೆ ತೆರಳಲು ಹೆಲಿಕಾಪ್ಟರ್ ಲ್ಯಾಂಡ್ ಮಾಡಿದ್ದರು. ರಾಹುಲ್ ಗಾಂಧಿ ಹೆಲಿಕಾಪ್ಟರ್ನಿಂದ ಇಳಿದ ನಂತರ ಫೈಯಿಂಗ್ ಸ್ಕ್ಯಾಡ್ ಅಧಿಕಾರಿಗಳು ಶೋಧ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
https://www.instagram.com/reel/C5xrNGfSV79/?igsh=d3JwY24xdG5wOTMx
ಬೆಳಗಾವಿ: ಮೈಸೂರು ನಗರದಲ್ಲಿರುವ ಚಾಮರಾಜೇಂದ್ರ ಮೃಗಾಲಯದಲ್ಲಿ 356 ನೌಕರರು ಕಾರ್ಯ ನಿರ್ವಹಿಸುತ್ತಿದ್ದು, ಕೇವಲ 9 ಮಂದಿ ಮಾತ್ರ ಖಾಯಂ ನೌಕರರಾಗಿದ್ದಾರೆ…
ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷಗಳ ತೀವ್ರ ವಿರೋಧ ಹಾಗೂ ಗದ್ದಲದ ಮಧ್ಯೆ ಕರ್ನಾಟಕ ದ್ವೇಷಭಾಷಣ ಹಾಗೂ ದ್ವೇಷಾಪರಾಧಗಳ ಪ್ರತಿಬಂಧನ ಮಸೂದೆ 2025ನ್ನು…
ಬೆಳಗಾವಿ: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ…
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪವಾಗಿದೆ. ಈ ಬಗ್ಗೆ ಸಾರಿಗೆ ಸಚಿವ…
ನವದೆಹಲಿ: ಲೋಕಸಭೆಯಲ್ಲಿ ವಿ-ಬಿಜಿ ರಾಮ್ ಜಿ ಮಸೂದೆ ಅಂಗೀಕಾರಗೊಂಡಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಇಂದು ಲೋಕಸಭೆಯು ರೋಜ್ಗಾರ್ ಮತ್ತು ಅಜೀವಿಕಾ…
ಬೆಳಗಾವಿ: ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗಳೇ ದರೋಡೆ, ಕಳ್ಳತನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಬೇಲಿಯೇ ಎದ್ದು…