ವಯನಾಡು: ಲೋಕಸಭೆ ಚುನಾವಣೆ ಘೋಷಣೆಯಾದ ಬಳಿಕ ಎರಡನೇ ಬಾರಿಗೆ ತಮ್ಮ ಸಂಸದೀಯ ಸ್ವಕ್ಷೇತ್ರವಾದ ಕೇರಳದ ವಯನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.
ಸೋಮವಾರ ಸುಲ್ತಾನ್ ಬತೇರಿಯ ಪ್ರದೇಶದಲ್ಲಿ ಕಾರಿನ ಮೇಲೆ ಕುಳಿತು ರಾಹುಲ್ ಗಾಂಧಿ ರೋಡ್ ಶೋ ನಡೆಸಿ, ರಸ್ತೆಯ ಇಕ್ಕೆಲಗಳಲ್ಲಿ ನೆರೆದಿಂದ ಸಾವಿರಾರು ಕಾರ್ಯಕರ್ತರತ್ತ ಕೈಬೀಸಿ ಮುಂದೆ ಸಾಗಿದರು.
ಇದಕ್ಕೂ ಮೊದಲು ತಮಿಳುನಾಡಿನ ಗಡಿಭಾಗದ ನೀಲಗಿರಿ ಜಿಲ್ಲೆಗೆ ತೆರಳಿ, ಅಲ್ಲಿನ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ರಾಹುಲ್ ಗಾಂಧಿ ಹೆಲಿಕಾಪ್ಟರ್ ತಪಾಸಣೆ ಮಾಡಿದ ಚುನಾವಣಾ ಅಧಿಕಾರಿಗಳು
ತಮಿಳುನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಅನ್ನು ಚುನಾವಣಾ ಅಧಿಕಾರಿಗಳು ಸೋಮವಾರ ತಪಾಸಣೆ ನಡೆಸಿದರು.
ಕೇರಳದ ವಯನಾಡ್ಗೆ ತೆರಳುವ ಮುನ್ನ ನೀಲಿಗಿರಿಗೆ ತೆರಳಲು ಹೆಲಿಕಾಪ್ಟರ್ ಲ್ಯಾಂಡ್ ಮಾಡಿದ್ದರು. ರಾಹುಲ್ ಗಾಂಧಿ ಹೆಲಿಕಾಪ್ಟರ್ನಿಂದ ಇಳಿದ ನಂತರ ಫೈಯಿಂಗ್ ಸ್ಕ್ಯಾಡ್ ಅಧಿಕಾರಿಗಳು ಶೋಧ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
https://www.instagram.com/reel/C5xrNGfSV79/?igsh=d3JwY24xdG5wOTMx
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…