ದೇಶ- ವಿದೇಶ

ಬಿಹಾರದಲ್ಲಿ ಮರು ಚುನಾವಣೆ ನಡೆಯಲಿ : ರಾಬರ್ಟ್‌ ವಾದ್ರಾ ಆಗ್ರಹ

ಇಂದೋರ್ : ಬಿಹಾರದಲ್ಲಿ ಮರು ಚುನಾವಣೆ ನಡೆಸಬೇಕು ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಆಗ್ರಹಿಸಿದ್ದಾರೆ.

ಮಧ್ಯಪ್ರದೇಶಕ್ಕೆ ಎರಡು ದಿನಗಳ ಧಾರ್ಮಿಕ ಭೇಟಿಗೆ ಆಗಮಿಸಿದ ಅವರು ಮಾಧ್ಯಮಗಳ ಜೊತೆ ಮಾತನಾಡಿ, ವಾಸ್ತವವಾಗಿ ಬಿಹಾರದ ಜನರು ಫಲಿತಾಂಶದಿಂದ ಸಂತೋಷವಾಗಿಲ್ಲ. ಏನೇ ನಡೆದರೂ ಅದು ಚುನಾವಣಾ ಆಯೋಗದಿಂದಾಗಿ ಸಂಭವಿಸಿದೆ. ಚುನಾವಣಾ ಆಯೋಗ ಸಹಾಯ ಮಾಡಿದೆ ಎಂದು ದೂರಿದರು.

ಇದನ್ನು ಓದಿ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಕ್‌ ಹಸೀನಾಗೆ ಗಲ್ಲು ಶಿಕ್ಷೆ ಪ್ರಕಟ

ರಾಹುಲ್ ಗಾಂಧಿ ಜನರನ್ನು ಭೇಟಿಯಾಗಲಿದ್ದು ಯವಕರು ಅವರ ಜೊತೆ ಕೈಜೋಡಿಸಲಿದ್ದಾರೆ. ಪ್ರಜಾಪ್ರಭುತ್ವವನ್ನು ರಕ್ಷಿಸಲು ಅವರು ಆಂದೋಲನವನ್ನು ಪ್ರಾರಂಭಿಸುತ್ತಾರೆ. ಬಿಹಾರದಲ್ಲಿ ಚುನಾವಣೆಯನ್ನು ಸರಿಯಾಗಿ ನಡೆಸಿಲ್ಲ ಎಂದು ಹೇಳಿದರು.

ದೇಶಕ್ಕೆ ಬದಲಾವಣೆಯ ಅಗತ್ಯವಿದೆ. ಸರ್ಕಾರ ಏನೇ ತಪ್ಪು ಮಾಡಿದರೂ, ಯುವಕರು ಅದನ್ನು ಇಷ್ಟಪಡುವುದಿಲ್ಲ. ನಾವು ಖಂಡಿತವಾಗಿಯೂ ಪ್ರಜಾಪ್ರಭುತ್ವದ ಉಳಿವಿಗಾಗಿ ಹೋರಾಡುತ್ತೇವೆ ಎಂದರು.

ಬಿಹಾರದ 243 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಎನ್‍ಡಿಎ 202 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ತನ್ನಲ್ಲಿಯೇ ಉಳಿಸಿಕೊಂಡಿದೆ. ಬಿಜೆಪಿ 89, ಜೆಡಿಯು 85 ಸ್ಥಾನಗಳನ್ನು ಗೆದ್ದುಕೊಂಡಿದೆ. ಕಾಂಗ್ರೆಸ್, ಆರ್‍ಜೆಡಿ ಮತ್ತು ಇತರ ಪಕ್ಷಗಳ ಒಕ್ಕೂಟವಾದ ಮಹಾಘಟಬಂಧನ್ ಕೇವಲ 35 ಸ್ಥಾನಗಳನ್ನು ಮಾತ್ರ ಗಳಿಸಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

14 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

14 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

14 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

14 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

15 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

15 hours ago