ದೇಶ- ವಿದೇಶ

ಬಿಹಾರದಲ್ಲಿ ಮರು ಚುನಾವಣೆ ನಡೆಯಲಿ : ರಾಬರ್ಟ್‌ ವಾದ್ರಾ ಆಗ್ರಹ

ಇಂದೋರ್ : ಬಿಹಾರದಲ್ಲಿ ಮರು ಚುನಾವಣೆ ನಡೆಸಬೇಕು ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಆಗ್ರಹಿಸಿದ್ದಾರೆ.

ಮಧ್ಯಪ್ರದೇಶಕ್ಕೆ ಎರಡು ದಿನಗಳ ಧಾರ್ಮಿಕ ಭೇಟಿಗೆ ಆಗಮಿಸಿದ ಅವರು ಮಾಧ್ಯಮಗಳ ಜೊತೆ ಮಾತನಾಡಿ, ವಾಸ್ತವವಾಗಿ ಬಿಹಾರದ ಜನರು ಫಲಿತಾಂಶದಿಂದ ಸಂತೋಷವಾಗಿಲ್ಲ. ಏನೇ ನಡೆದರೂ ಅದು ಚುನಾವಣಾ ಆಯೋಗದಿಂದಾಗಿ ಸಂಭವಿಸಿದೆ. ಚುನಾವಣಾ ಆಯೋಗ ಸಹಾಯ ಮಾಡಿದೆ ಎಂದು ದೂರಿದರು.

ಇದನ್ನು ಓದಿ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಕ್‌ ಹಸೀನಾಗೆ ಗಲ್ಲು ಶಿಕ್ಷೆ ಪ್ರಕಟ

ರಾಹುಲ್ ಗಾಂಧಿ ಜನರನ್ನು ಭೇಟಿಯಾಗಲಿದ್ದು ಯವಕರು ಅವರ ಜೊತೆ ಕೈಜೋಡಿಸಲಿದ್ದಾರೆ. ಪ್ರಜಾಪ್ರಭುತ್ವವನ್ನು ರಕ್ಷಿಸಲು ಅವರು ಆಂದೋಲನವನ್ನು ಪ್ರಾರಂಭಿಸುತ್ತಾರೆ. ಬಿಹಾರದಲ್ಲಿ ಚುನಾವಣೆಯನ್ನು ಸರಿಯಾಗಿ ನಡೆಸಿಲ್ಲ ಎಂದು ಹೇಳಿದರು.

ದೇಶಕ್ಕೆ ಬದಲಾವಣೆಯ ಅಗತ್ಯವಿದೆ. ಸರ್ಕಾರ ಏನೇ ತಪ್ಪು ಮಾಡಿದರೂ, ಯುವಕರು ಅದನ್ನು ಇಷ್ಟಪಡುವುದಿಲ್ಲ. ನಾವು ಖಂಡಿತವಾಗಿಯೂ ಪ್ರಜಾಪ್ರಭುತ್ವದ ಉಳಿವಿಗಾಗಿ ಹೋರಾಡುತ್ತೇವೆ ಎಂದರು.

ಬಿಹಾರದ 243 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಎನ್‍ಡಿಎ 202 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ತನ್ನಲ್ಲಿಯೇ ಉಳಿಸಿಕೊಂಡಿದೆ. ಬಿಜೆಪಿ 89, ಜೆಡಿಯು 85 ಸ್ಥಾನಗಳನ್ನು ಗೆದ್ದುಕೊಂಡಿದೆ. ಕಾಂಗ್ರೆಸ್, ಆರ್‍ಜೆಡಿ ಮತ್ತು ಇತರ ಪಕ್ಷಗಳ ಒಕ್ಕೂಟವಾದ ಮಹಾಘಟಬಂಧನ್ ಕೇವಲ 35 ಸ್ಥಾನಗಳನ್ನು ಮಾತ್ರ ಗಳಿಸಿದೆ.

ಆಂದೋಲನ ಡೆಸ್ಕ್

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

9 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

12 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

13 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

14 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

15 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

19 hours ago