ಇಂದೋರ್ : ಬಿಹಾರದಲ್ಲಿ ಮರು ಚುನಾವಣೆ ನಡೆಸಬೇಕು ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಆಗ್ರಹಿಸಿದ್ದಾರೆ.
ಮಧ್ಯಪ್ರದೇಶಕ್ಕೆ ಎರಡು ದಿನಗಳ ಧಾರ್ಮಿಕ ಭೇಟಿಗೆ ಆಗಮಿಸಿದ ಅವರು ಮಾಧ್ಯಮಗಳ ಜೊತೆ ಮಾತನಾಡಿ, ವಾಸ್ತವವಾಗಿ ಬಿಹಾರದ ಜನರು ಫಲಿತಾಂಶದಿಂದ ಸಂತೋಷವಾಗಿಲ್ಲ. ಏನೇ ನಡೆದರೂ ಅದು ಚುನಾವಣಾ ಆಯೋಗದಿಂದಾಗಿ ಸಂಭವಿಸಿದೆ. ಚುನಾವಣಾ ಆಯೋಗ ಸಹಾಯ ಮಾಡಿದೆ ಎಂದು ದೂರಿದರು.
ಇದನ್ನು ಓದಿ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ ಪ್ರಕಟ
ರಾಹುಲ್ ಗಾಂಧಿ ಜನರನ್ನು ಭೇಟಿಯಾಗಲಿದ್ದು ಯವಕರು ಅವರ ಜೊತೆ ಕೈಜೋಡಿಸಲಿದ್ದಾರೆ. ಪ್ರಜಾಪ್ರಭುತ್ವವನ್ನು ರಕ್ಷಿಸಲು ಅವರು ಆಂದೋಲನವನ್ನು ಪ್ರಾರಂಭಿಸುತ್ತಾರೆ. ಬಿಹಾರದಲ್ಲಿ ಚುನಾವಣೆಯನ್ನು ಸರಿಯಾಗಿ ನಡೆಸಿಲ್ಲ ಎಂದು ಹೇಳಿದರು.
ದೇಶಕ್ಕೆ ಬದಲಾವಣೆಯ ಅಗತ್ಯವಿದೆ. ಸರ್ಕಾರ ಏನೇ ತಪ್ಪು ಮಾಡಿದರೂ, ಯುವಕರು ಅದನ್ನು ಇಷ್ಟಪಡುವುದಿಲ್ಲ. ನಾವು ಖಂಡಿತವಾಗಿಯೂ ಪ್ರಜಾಪ್ರಭುತ್ವದ ಉಳಿವಿಗಾಗಿ ಹೋರಾಡುತ್ತೇವೆ ಎಂದರು.
ಬಿಹಾರದ 243 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಎನ್ಡಿಎ 202 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ತನ್ನಲ್ಲಿಯೇ ಉಳಿಸಿಕೊಂಡಿದೆ. ಬಿಜೆಪಿ 89, ಜೆಡಿಯು 85 ಸ್ಥಾನಗಳನ್ನು ಗೆದ್ದುಕೊಂಡಿದೆ. ಕಾಂಗ್ರೆಸ್, ಆರ್ಜೆಡಿ ಮತ್ತು ಇತರ ಪಕ್ಷಗಳ ಒಕ್ಕೂಟವಾದ ಮಹಾಘಟಬಂಧನ್ ಕೇವಲ 35 ಸ್ಥಾನಗಳನ್ನು ಮಾತ್ರ ಗಳಿಸಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…