ಇಂದೋರ್ : ಬಿಹಾರದಲ್ಲಿ ಮರು ಚುನಾವಣೆ ನಡೆಸಬೇಕು ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಆಗ್ರಹಿಸಿದ್ದಾರೆ.
ಮಧ್ಯಪ್ರದೇಶಕ್ಕೆ ಎರಡು ದಿನಗಳ ಧಾರ್ಮಿಕ ಭೇಟಿಗೆ ಆಗಮಿಸಿದ ಅವರು ಮಾಧ್ಯಮಗಳ ಜೊತೆ ಮಾತನಾಡಿ, ವಾಸ್ತವವಾಗಿ ಬಿಹಾರದ ಜನರು ಫಲಿತಾಂಶದಿಂದ ಸಂತೋಷವಾಗಿಲ್ಲ. ಏನೇ ನಡೆದರೂ ಅದು ಚುನಾವಣಾ ಆಯೋಗದಿಂದಾಗಿ ಸಂಭವಿಸಿದೆ. ಚುನಾವಣಾ ಆಯೋಗ ಸಹಾಯ ಮಾಡಿದೆ ಎಂದು ದೂರಿದರು.
ಇದನ್ನು ಓದಿ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ ಪ್ರಕಟ
ರಾಹುಲ್ ಗಾಂಧಿ ಜನರನ್ನು ಭೇಟಿಯಾಗಲಿದ್ದು ಯವಕರು ಅವರ ಜೊತೆ ಕೈಜೋಡಿಸಲಿದ್ದಾರೆ. ಪ್ರಜಾಪ್ರಭುತ್ವವನ್ನು ರಕ್ಷಿಸಲು ಅವರು ಆಂದೋಲನವನ್ನು ಪ್ರಾರಂಭಿಸುತ್ತಾರೆ. ಬಿಹಾರದಲ್ಲಿ ಚುನಾವಣೆಯನ್ನು ಸರಿಯಾಗಿ ನಡೆಸಿಲ್ಲ ಎಂದು ಹೇಳಿದರು.
ದೇಶಕ್ಕೆ ಬದಲಾವಣೆಯ ಅಗತ್ಯವಿದೆ. ಸರ್ಕಾರ ಏನೇ ತಪ್ಪು ಮಾಡಿದರೂ, ಯುವಕರು ಅದನ್ನು ಇಷ್ಟಪಡುವುದಿಲ್ಲ. ನಾವು ಖಂಡಿತವಾಗಿಯೂ ಪ್ರಜಾಪ್ರಭುತ್ವದ ಉಳಿವಿಗಾಗಿ ಹೋರಾಡುತ್ತೇವೆ ಎಂದರು.
ಬಿಹಾರದ 243 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಎನ್ಡಿಎ 202 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ತನ್ನಲ್ಲಿಯೇ ಉಳಿಸಿಕೊಂಡಿದೆ. ಬಿಜೆಪಿ 89, ಜೆಡಿಯು 85 ಸ್ಥಾನಗಳನ್ನು ಗೆದ್ದುಕೊಂಡಿದೆ. ಕಾಂಗ್ರೆಸ್, ಆರ್ಜೆಡಿ ಮತ್ತು ಇತರ ಪಕ್ಷಗಳ ಒಕ್ಕೂಟವಾದ ಮಹಾಘಟಬಂಧನ್ ಕೇವಲ 35 ಸ್ಥಾನಗಳನ್ನು ಮಾತ್ರ ಗಳಿಸಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು…
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…