Mysore
33
few clouds

Social Media

ಬುಧವಾರ, 01 ಏಪ್ರಿಲ 2026
Light
Dark

ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ: ರಾಬರ್ಟ್‌ ವಾದ್ರಾಗೆ ಇಡಿ ಸಮನ್ಸ್‌

ನವದೆಹಲಿ: ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ಹಾಗೂ ಉದ್ಯಮಿ ರಾಬರ್ಟ್‌ ವಾದ್ರಾಗೆ ಜಾರಿ ನಿರ್ದೇಶನಾಲಯ ಸಮನ್ಸ್‌ ಜಾರಿ ಮಾಡಿದೆ.

ಹರಿಯಾಣದ ಗುರುಗ್ರಾಮ್‌ನಲ್ಲಿ ಅತೀ ಕಡಿಮೆ ಬೆಲೆ ಭೂಮಿ ಖರೀದಿ ಮಾಡಿ, ಅತೀ ಹೆಚ್ಚಿನ ಬೆಲೆಗೆ ಜಮೀನು ಮಾರಾಟ ಮಾಡಿದ ಆರೋಪ ರಾಬರ್ಟ್ ವಾದ್ರಾ ಅವರ ಮೇಲಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಏಪ್ರಿಲ್.‌8ರಂದು ಸಮನ್ಸ್‌ ನೀಡಲಾಗಿತ್ತು. ಅಂದು ರಾಬರ್ಟ್‌ ವಾದ್ರಾ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಮತ್ತೊಂದು ಸಮನ್ಸ್‌ ಜಾರಿ ಮಾಡಲಾಗಿದೆ.

ಸಮನ್ಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಇಂದು ಇಡಿ ಕಚೇರಿಗೆ ತೆರಳುವಾಗ ಬಿಜೆಪಿ ವಿರುದ್ಧ ಕಿಡಿಕಾರಿದ ರಾಬರ್ಟ್‌ ವಾದ್ರಾ ಅವರು, ಇದು ಬಿಜೆಪಿಯ ರಾಜಕೀಯ ದ್ವೇಷ. ನಾನು ಜನರ ಪರ ಧ್ವನಿ ಎತ್ತಿದಾಗಲೆಲ್ಲಾ ಅವರು ನನ್ನನ್ನು ನಿಗ್ರಹಿಸಲು ಪ್ರಯತ್ನಿಸುತ್ತಾರೆ. ನನ್ನ ಬಳಿ ಮುಚ್ಚಿಡಲು ಏನೂ ಇಲ್ಲ. ಏನು ಕೇಳಿದರೂ ಇಡಿ ಅಧಿಕಾರಿಗಳಿಗೆ ಉತ್ತರಿಸುತ್ತೇನೆ ಎಂದು ಹೇಳಿದ್ದಾರೆ.

Tags:
error: Content is protected !!