ನವದೆಹಲಿ: ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.
ಹರಿಯಾಣದ ಗುರುಗ್ರಾಮ್ನಲ್ಲಿ ಅತೀ ಕಡಿಮೆ ಬೆಲೆ ಭೂಮಿ ಖರೀದಿ ಮಾಡಿ, ಅತೀ ಹೆಚ್ಚಿನ ಬೆಲೆಗೆ ಜಮೀನು ಮಾರಾಟ ಮಾಡಿದ ಆರೋಪ ರಾಬರ್ಟ್ ವಾದ್ರಾ ಅವರ ಮೇಲಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಏಪ್ರಿಲ್.8ರಂದು ಸಮನ್ಸ್ ನೀಡಲಾಗಿತ್ತು. ಅಂದು ರಾಬರ್ಟ್ ವಾದ್ರಾ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಮತ್ತೊಂದು ಸಮನ್ಸ್ ಜಾರಿ ಮಾಡಲಾಗಿದೆ.
ಸಮನ್ಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಇಂದು ಇಡಿ ಕಚೇರಿಗೆ ತೆರಳುವಾಗ ಬಿಜೆಪಿ ವಿರುದ್ಧ ಕಿಡಿಕಾರಿದ ರಾಬರ್ಟ್ ವಾದ್ರಾ ಅವರು, ಇದು ಬಿಜೆಪಿಯ ರಾಜಕೀಯ ದ್ವೇಷ. ನಾನು ಜನರ ಪರ ಧ್ವನಿ ಎತ್ತಿದಾಗಲೆಲ್ಲಾ ಅವರು ನನ್ನನ್ನು ನಿಗ್ರಹಿಸಲು ಪ್ರಯತ್ನಿಸುತ್ತಾರೆ. ನನ್ನ ಬಳಿ ಮುಚ್ಚಿಡಲು ಏನೂ ಇಲ್ಲ. ಏನು ಕೇಳಿದರೂ ಇಡಿ ಅಧಿಕಾರಿಗಳಿಗೆ ಉತ್ತರಿಸುತ್ತೇನೆ ಎಂದು ಹೇಳಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…