ನವದೆಹಲಿ: ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.
ಹರಿಯಾಣದ ಗುರುಗ್ರಾಮ್ನಲ್ಲಿ ಅತೀ ಕಡಿಮೆ ಬೆಲೆ ಭೂಮಿ ಖರೀದಿ ಮಾಡಿ, ಅತೀ ಹೆಚ್ಚಿನ ಬೆಲೆಗೆ ಜಮೀನು ಮಾರಾಟ ಮಾಡಿದ ಆರೋಪ ರಾಬರ್ಟ್ ವಾದ್ರಾ ಅವರ ಮೇಲಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಏಪ್ರಿಲ್.8ರಂದು ಸಮನ್ಸ್ ನೀಡಲಾಗಿತ್ತು. ಅಂದು ರಾಬರ್ಟ್ ವಾದ್ರಾ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಮತ್ತೊಂದು ಸಮನ್ಸ್ ಜಾರಿ ಮಾಡಲಾಗಿದೆ.
ಸಮನ್ಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಇಂದು ಇಡಿ ಕಚೇರಿಗೆ ತೆರಳುವಾಗ ಬಿಜೆಪಿ ವಿರುದ್ಧ ಕಿಡಿಕಾರಿದ ರಾಬರ್ಟ್ ವಾದ್ರಾ ಅವರು, ಇದು ಬಿಜೆಪಿಯ ರಾಜಕೀಯ ದ್ವೇಷ. ನಾನು ಜನರ ಪರ ಧ್ವನಿ ಎತ್ತಿದಾಗಲೆಲ್ಲಾ ಅವರು ನನ್ನನ್ನು ನಿಗ್ರಹಿಸಲು ಪ್ರಯತ್ನಿಸುತ್ತಾರೆ. ನನ್ನ ಬಳಿ ಮುಚ್ಚಿಡಲು ಏನೂ ಇಲ್ಲ. ಏನು ಕೇಳಿದರೂ ಇಡಿ ಅಧಿಕಾರಿಗಳಿಗೆ ಉತ್ತರಿಸುತ್ತೇನೆ ಎಂದು ಹೇಳಿದ್ದಾರೆ.
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…
ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…
ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್ ನ್ಯೂಸ್ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…
ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…
ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…