ದೇಶ- ವಿದೇಶ

ರೋಹಿತ್‌ ವೆಮುಲ ಆತ್ಮಹತ್ಯೆ ಪ್ರಕರಣ: ಪೊಲೀಸರಿಂದ ಅಂತಿಮ ವರದಿ ಸಲ್ಲಿಕೆ!

ಹೈದರಾಬಾದ್‌: ಹೈದರಾಬಾದ್‌ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ರೋಹಿತ್‌ ವೆಮುಲ ಸಾವಿನ ಪ್ರಕರಣಕ್ಕೆ ಕೊನೆಗೂ ಅಂತ್ಯ ಸಿಕ್ಕಿದೆ. ಈ ಸಂಬಂಧ ಅಲ್ಲಿನ ಪೊಲೀಸರು ಸ್ಥಳೀಯ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದಾರೆ.

ವೆಮುಲ ಪ್ರಕರಣವನು ತನಿಖೆ ಮಾಡಿದ್ದ ಸೈಬರಾಬಾದ್‌ ಪೊಲೀಸರು ತಮ್ಮ ವರದಿಯನ್ನು ನ್ಯಾಯಾಲಯಕ್ಕೆ ನೀಡಿದ್ದರು, ಅದರಲ್ಲಿ ಅಸಲಿಗೆ “ರೋಹಿತ್‌ ವೆಮುಲ ಪರಿಶಿಷ್ಟ ಜಾತಿಗೆ ಸೇರಿದವರಲ್ಲ. ತಮ್ಮ ನಿಜವಾದ ಗುರುತು ಎಲ್ಲಿ ಬಯಲಾಗುತ್ತದೆಯೋ ಎಂಬ ಭಯದಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ವೆಮುಲಾ ಅವರಿಗೆ ಹಲವಾರು ಸಮಸ್ಯೆಗಳಿದ್ದವು. ಅವು ಅವರನ್ನು ಆತ್ಯಹತ್ಯಗೆ ಪ್ರೇರೇಪಿಸಿವೆ. ಪ್ರಮುಖವಾಗಿ ಅವರು ಪರಿಶಿಷ್ಟ ಜಾತಿಗೆ ಸೇರಿದವರಲ್ಲ ಎಂಬುದು ಅವರಿಗೂ ತಿಳಿದಿತ್ತು. ಅವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ಸ್ವತಃ ಅವರ ತಾಯಿಯೇ ಕೊಡಿಸಿದ್ದರು. ಈ ವಿಷಯ ಬಹಿರಂಗವಾದಲ್ಲಿ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ, ಮತ್ತು ಈವರೆಗೆ ಸಂಪಾದಿಸಿ ಎಲ್ಲಾ ಶೈಕ್ಷಣಿಕ ಪ್ರಮಾಣ ಪತ್ರಗಳು ವ್ಯರ್ಥವಾಗುವ ಜೊತೆಗೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಮ್ಮ ವರದಿಯಲ್ಲಿ ವಿವರಿಸಿದ್ದಾರೆ.

ರೋಹಿತ್‌ ವೆಮುಲಾ ಅವರು 2016 ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಿನ ಕುಲಪತಿ ಅಪ್ಪಾರಾವ್‌ ಪೊಡಿಲೆ ಮತ್ತು ಈಗಿನ ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಪ್ರಮುಖ ಆರೋಪಿಗಳಾಗಿದ್ದರು.

 

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

51 mins ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

1 hour ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

2 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

2 hours ago

ಡಿ.16 ರಂದು ಮಳವಳ್ಳಿಗೆ ರಾಷ್ಟ್ರಪತಿ ಆಗಮನ : ಭದ್ರತಾ ವ್ಯವಸ್ಥೆ ಪರಿಶೀಲನೆ

ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

2 hours ago

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ : ಗ್ರಾ.ಪಂ ಮಾಜಿ ಅಧ್ಯಕ್ಷನ ವಿರುದ್ಧ ದೂರು

ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…

2 hours ago