ಬಾರ್ಬಡೋಸ್: ಅತ್ಯಂತ ರೋಚಕವಾಗಿ ನಡೆದ ಟಿ20 ವಿಶ್ವಕಪ್ ಪೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್ಗಳಿಂದ ಮಣಿಸಿದ ಭಾರತ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಈ ಗೆಲುವಿನ ಸವಿ ನೆನಪಿಗಾಗಿ ತಂಡದ ನಾಯಕ ರೋಹಿತ್ ಶರ್ಮಾ ಅವರು ಪಿಚ್ನ ಒಂದು ಚಿಟಿಕೆ ಮಣ್ಣನ್ನು ಬಾಯಿಗೆ ಹಾಕಿದ್ದಾರೆ. ಈ ವಿಡಿಯೋವನ್ನು ಐಸಿಸಿ ತನ್ನ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದೆ.
ಫುಟ್ಬಾಲ್, ಟೆನಿಸ್ ಸೇರಿ ಹೊರಾಂಗಣ ಕ್ರೀಡೆಯಲ್ಲಿ ಚಾಂಪಿಯನ್ ಆದ ತಂಡದ ಕೆಲ ಆಟಗಾರರು ಮೈದಾನದ ಒಂದೆರಡು ಹುಲ್ಲನ್ನು ಕಿತ್ತು ತಿನ್ನುವ ಮೂಲಕ ಗೆಲುವಿಗೆ ನೆರವಾದ ಈ ಮೈದಾನದ ಋಣವನ್ನು ತೀರಿಸಿಕೊಳ್ಳುತ್ತಾರೆ. ಇದೇ ರೀತಿ ರೋಹಿತ್ ಶರ್ಮಾ ಕೂಡ ಕಪ್ ಗೆದ್ದ ಬಳಿಕ ಪಿಚ್ನಿಂದ ಒಂದು ಚಿಟಿಕೆ ಮಣ್ಣನ್ನು ಬಾಯಿಗೆ ಹಾಕಿದ್ದಾರೆ.
ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್ ಗೆದ್ದ ರೋಹಿತ್ ಗೆಲುವಿನ ಬಳಿಕ ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು.
ಹನೂರು : ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಬುಧವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ…
ನವದೆಹಲಿ: ಭಾರತ್ ಜೋಡೋ ಯಾತ್ರೆಯ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತೀಯ ಸೇನೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ…
ಮೈಸೂರು : ನಗರದಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಎಂಡಿಎ) ರಚಿಸಿರುವ ನಿವೇಶನಗಳನ್ನು ತೆರವುಗೊಳಿಸಿ ದೊಡ್ಡಕೆರೆ ಮತ್ತು ಲಿಂಗಾಂಬುಧಿ ಕೆರೆಯನ್ನು ಪುನರುಜ್ಜೀವನಗೊಳಿಸಬೇಕು ಎಂದು…
ಬೆಂಗಳೂರು : 38 ತಿಂಗಳ ವೇತನ ಬಾಕಿ ಹಣ ನೀಡಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್ಆರ್ಟಿಸಿಯ…
ಬೆಂಗಳೂರು : ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಾರ್ಯವ್ಯಾಪ್ತಿಯನ್ನು ನಿರ್ಬಂಧಿಸುವ ಕುರಿತು ವಾರ್ತಾ ಇಲಾಖೆಗೆ ಸರ್ಕಾರ ಪತ್ರ ಬರೆದಿದೆ. ಪತ್ರದಲ್ಲಿ, ಮಾಧ್ಯಮಗಳು…
ಮೈಸೂರು : ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನಗಳಲ್ಲಿ ಫೆಬ್ರವರಿ 19ರಿಂದ ಸಫಾರಿ ಪುನರಾರಂಭವಾಗಲಿದೆ ಎಂದು ಅರಣ್ಯ ಸಚಿವ ಈಶ್ವರ…