ಬಾರ್ಬಡೋಸ್: ಅತ್ಯಂತ ರೋಚಕವಾಗಿ ನಡೆದ ಟಿ20 ವಿಶ್ವಕಪ್ ಪೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್ಗಳಿಂದ ಮಣಿಸಿದ ಭಾರತ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಈ ಗೆಲುವಿನ ಸವಿ ನೆನಪಿಗಾಗಿ ತಂಡದ ನಾಯಕ ರೋಹಿತ್ ಶರ್ಮಾ ಅವರು ಪಿಚ್ನ ಒಂದು ಚಿಟಿಕೆ ಮಣ್ಣನ್ನು ಬಾಯಿಗೆ ಹಾಕಿದ್ದಾರೆ. ಈ ವಿಡಿಯೋವನ್ನು ಐಸಿಸಿ ತನ್ನ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದೆ.
ಫುಟ್ಬಾಲ್, ಟೆನಿಸ್ ಸೇರಿ ಹೊರಾಂಗಣ ಕ್ರೀಡೆಯಲ್ಲಿ ಚಾಂಪಿಯನ್ ಆದ ತಂಡದ ಕೆಲ ಆಟಗಾರರು ಮೈದಾನದ ಒಂದೆರಡು ಹುಲ್ಲನ್ನು ಕಿತ್ತು ತಿನ್ನುವ ಮೂಲಕ ಗೆಲುವಿಗೆ ನೆರವಾದ ಈ ಮೈದಾನದ ಋಣವನ್ನು ತೀರಿಸಿಕೊಳ್ಳುತ್ತಾರೆ. ಇದೇ ರೀತಿ ರೋಹಿತ್ ಶರ್ಮಾ ಕೂಡ ಕಪ್ ಗೆದ್ದ ಬಳಿಕ ಪಿಚ್ನಿಂದ ಒಂದು ಚಿಟಿಕೆ ಮಣ್ಣನ್ನು ಬಾಯಿಗೆ ಹಾಕಿದ್ದಾರೆ.
ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್ ಗೆದ್ದ ರೋಹಿತ್ ಗೆಲುವಿನ ಬಳಿಕ ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು.
ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ…
ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…
ಕಲಬುರ್ಗಿ: ಇಂದು(ಏಪ್ರಿಲ್.15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…
ಲಕ್ನೋ: ಕರ್ನಾಟಕ ಕಾಂಗ್ರೆಸ್ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ…
ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…