ದೇಶ- ವಿದೇಶ

ಕೆಲ ಧರ್ಮ, ಭಾಷೆ ಮತ್ತು ಸಮುದಾಯಗಳು ಕೀಳು ಎಂದು ಆರ್‌ಎಸ್‌ಎಸ್‌ ಭಾವಿಸುತ್ತದೆ: ರಾಹುಲ್‌ ಗಾಂಧಿ

ವಾಷಿಂಗ್ಟನ್:‌ ಅಮೆರಿಕಾ ಪ್ರವಾಸದಲ್ಲಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ವಾಷಿಂಗ್ಟನ್‌ನ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿ ಆರ್‌ಎಸ್‌ಎಸ್‌ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ.

ಆರ್‌ಎಸ್‌ಎಸ್‌ ಕೆಲ ಧರ್ಮಗಳು, ಭಾಷೆಗಳು ಮತ್ತು ಸಮುದಾಯಗಳನ್ನು ಇತರರಿಗಿಂತ ಕೀಳು ಎಂದು ಪರಿಗಣಿಸುತ್ತದೆ ಎಂದು ಟೀಕಿಸಿದ ರಾಹುಲ್‌ ಗಾಂಧಿ ಭಾರತದಲ್ಲಿ ಹೋರಾಟ ಇದರ ಬಗ್ಗೆಯೇ ಹೊರತು ರಾಜಕೀಯದ ಬಗ್ಗೆ ಅಲ್ಲ ಎಂದು ಹೇಳಿದರು.

ದೇಶದಲ್ಲಿ ಹೋರಾಟ ರಾಜಕೀಯಕ್ಕೆ ಸಂಬಂಧಿಸಿದ್ದು ಎಂದು ಮೇಲ್ನೋಟಕ್ಕೆ ಕಾಣುತ್ತದೆ ಅಷ್ಟೇ. ಆದರೆ ಹೋರಾಟ ರಾಜಕೀಯಕ್ಕೆ ಸಂಬಂಧಿಸಿದ್ದಲ್ಲ ಎಂದ ರಾಹುಲ್‌ ಗಾಂಧಿ ಮುಂದಿನ ಸಾಲಿನಲ್ಲಿ ಕುಳಿತಿದ್ದ ಸಿಖ್‌ ಧರ್ಮೀಯರೊಬ್ಬರನ್ನು ಮಾತನಾಡಿಸಿ ತನ್ನ ಹೆಸರನ್ನು ಹೇಳುವಂತೆ ಕೇಳಿದರು.

ಟೋಪಿ ತೊಟ್ಟ ಅಣ್ಣ ನಿಮ್ಮ ಹೆಸರೇನು ಎಂದು ಕೇಳಿದ ರಾಗಾ ಭಾರತದಲ್ಲಿ ಸಿಖ್‌ ಜನರು ಪೇಟವನ್ನು ಧರಿಸಲು ಅನುಮತಿ ನೀಡಬಹುದೇ ಬೇಡವೇ ಅಥವಾ ಅವರು ಗುರುದ್ವಾರಕ್ಕೆ ಹೋಗುವುದು ಸಾಧ್ಯವೇ ಎಂಬುದಕ್ಕಾಗಿ ಹೋರಾಟಗಳು ನಡೆದಿವೆ. ಇದು ಕೇವಲ ಒಂದು ಧರ್ಮದಲ್ಲಿ ಮಾತ್ರವಲ್ಲ ಎಲ್ಲಾ ಧರ್ಮದಲ್ಲೂ ಇಂತಹ ಹೋರಾಟಗಳಿವೆ ಎಂದರು.

ಆರ್‌ಎಸ್‌ಎಸ್‌ ಕುರಿತು ಮಾತನಾಡಿದ ಅವರು ಕೆಲವು ರಾಜ್ಯಗಳು ಇತರೆ ರಾಜ್ಯಗಳಿಗಿಂತ ಕೀಳು, ಕೆಲವು ಧರ್ಮಗಳು ಇತರೆ ಧರ್ಮಗಳಿಗಿಂತ ಕೀಳು, ಕೆಲವು ಸಮುದಾಯಗಳು ಇತರೆ ಸಮುದಾಯಗಳಿಗಿಂತ ಕೀಳು ಎಂದು ಹೇಳುವುದು ಆರ್‌ಎಸ್‌ಎಸ್‌ನ ಸಿದ್ಧಾಂತವಾಗಿದೆ ಎಂದರು. ಲೋಕಸಭೆ, ವಿಧಾನಸಭೆ ಚುನಾವಣೆಗಳಲ್ಲಿ ಇಂತಹ ಟೀಕೆಗಳು, ಹೋರಾಟಗಳೇ ಕಂಡುಬರಲಿವೆ ಹೊರತು ಸೈದ್ಧಾಂತಿಕ ಹೋರಾಟಗಳಲ್ಲ ಎಂದರು.

ಅಲ್ಲದೇ ಹೋರಾಟ ನಾವು ಯಾವ ರೀತಿಯ ಭಾರತವನ್ನು ನಿರ್ಮಿಸಲಿದ್ದೇವೆ ಎಂಬುದರ ಕುರಿತು ಇರಬೇಕು. ಜನರು ಯಾವುದೇ ಪ್ರದೇಶಕ್ಕೆ ಸೇರಿದವರಾಗಿದ್ದರೂ, ಅವರಿಗೆ ತಮ್ಮದೇ ಆದ ಇತಿಹಾಸವಿದೆ, ತಮ್ಮದೇ ಆದ ಸಂಪ್ರದಾಯವಿದೆ, ತಮ್ಮದೇ ಆದ ಭಾಷೆ ಇದೆ. ಅವುಗಳೆಲ್ಲವೂ ಇತರರಂತೆ ಮುಖ್ಯ ಎಂದು ರಾಗಾ ಹೇಳಿದರು.

andolana

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

5 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

9 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

9 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

9 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

9 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

9 hours ago