ದೇಶ- ವಿದೇಶ

ಕೆಲ ಧರ್ಮ, ಭಾಷೆ ಮತ್ತು ಸಮುದಾಯಗಳು ಕೀಳು ಎಂದು ಆರ್‌ಎಸ್‌ಎಸ್‌ ಭಾವಿಸುತ್ತದೆ: ರಾಹುಲ್‌ ಗಾಂಧಿ

ವಾಷಿಂಗ್ಟನ್:‌ ಅಮೆರಿಕಾ ಪ್ರವಾಸದಲ್ಲಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ವಾಷಿಂಗ್ಟನ್‌ನ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿ ಆರ್‌ಎಸ್‌ಎಸ್‌ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ.

ಆರ್‌ಎಸ್‌ಎಸ್‌ ಕೆಲ ಧರ್ಮಗಳು, ಭಾಷೆಗಳು ಮತ್ತು ಸಮುದಾಯಗಳನ್ನು ಇತರರಿಗಿಂತ ಕೀಳು ಎಂದು ಪರಿಗಣಿಸುತ್ತದೆ ಎಂದು ಟೀಕಿಸಿದ ರಾಹುಲ್‌ ಗಾಂಧಿ ಭಾರತದಲ್ಲಿ ಹೋರಾಟ ಇದರ ಬಗ್ಗೆಯೇ ಹೊರತು ರಾಜಕೀಯದ ಬಗ್ಗೆ ಅಲ್ಲ ಎಂದು ಹೇಳಿದರು.

ದೇಶದಲ್ಲಿ ಹೋರಾಟ ರಾಜಕೀಯಕ್ಕೆ ಸಂಬಂಧಿಸಿದ್ದು ಎಂದು ಮೇಲ್ನೋಟಕ್ಕೆ ಕಾಣುತ್ತದೆ ಅಷ್ಟೇ. ಆದರೆ ಹೋರಾಟ ರಾಜಕೀಯಕ್ಕೆ ಸಂಬಂಧಿಸಿದ್ದಲ್ಲ ಎಂದ ರಾಹುಲ್‌ ಗಾಂಧಿ ಮುಂದಿನ ಸಾಲಿನಲ್ಲಿ ಕುಳಿತಿದ್ದ ಸಿಖ್‌ ಧರ್ಮೀಯರೊಬ್ಬರನ್ನು ಮಾತನಾಡಿಸಿ ತನ್ನ ಹೆಸರನ್ನು ಹೇಳುವಂತೆ ಕೇಳಿದರು.

ಟೋಪಿ ತೊಟ್ಟ ಅಣ್ಣ ನಿಮ್ಮ ಹೆಸರೇನು ಎಂದು ಕೇಳಿದ ರಾಗಾ ಭಾರತದಲ್ಲಿ ಸಿಖ್‌ ಜನರು ಪೇಟವನ್ನು ಧರಿಸಲು ಅನುಮತಿ ನೀಡಬಹುದೇ ಬೇಡವೇ ಅಥವಾ ಅವರು ಗುರುದ್ವಾರಕ್ಕೆ ಹೋಗುವುದು ಸಾಧ್ಯವೇ ಎಂಬುದಕ್ಕಾಗಿ ಹೋರಾಟಗಳು ನಡೆದಿವೆ. ಇದು ಕೇವಲ ಒಂದು ಧರ್ಮದಲ್ಲಿ ಮಾತ್ರವಲ್ಲ ಎಲ್ಲಾ ಧರ್ಮದಲ್ಲೂ ಇಂತಹ ಹೋರಾಟಗಳಿವೆ ಎಂದರು.

ಆರ್‌ಎಸ್‌ಎಸ್‌ ಕುರಿತು ಮಾತನಾಡಿದ ಅವರು ಕೆಲವು ರಾಜ್ಯಗಳು ಇತರೆ ರಾಜ್ಯಗಳಿಗಿಂತ ಕೀಳು, ಕೆಲವು ಧರ್ಮಗಳು ಇತರೆ ಧರ್ಮಗಳಿಗಿಂತ ಕೀಳು, ಕೆಲವು ಸಮುದಾಯಗಳು ಇತರೆ ಸಮುದಾಯಗಳಿಗಿಂತ ಕೀಳು ಎಂದು ಹೇಳುವುದು ಆರ್‌ಎಸ್‌ಎಸ್‌ನ ಸಿದ್ಧಾಂತವಾಗಿದೆ ಎಂದರು. ಲೋಕಸಭೆ, ವಿಧಾನಸಭೆ ಚುನಾವಣೆಗಳಲ್ಲಿ ಇಂತಹ ಟೀಕೆಗಳು, ಹೋರಾಟಗಳೇ ಕಂಡುಬರಲಿವೆ ಹೊರತು ಸೈದ್ಧಾಂತಿಕ ಹೋರಾಟಗಳಲ್ಲ ಎಂದರು.

ಅಲ್ಲದೇ ಹೋರಾಟ ನಾವು ಯಾವ ರೀತಿಯ ಭಾರತವನ್ನು ನಿರ್ಮಿಸಲಿದ್ದೇವೆ ಎಂಬುದರ ಕುರಿತು ಇರಬೇಕು. ಜನರು ಯಾವುದೇ ಪ್ರದೇಶಕ್ಕೆ ಸೇರಿದವರಾಗಿದ್ದರೂ, ಅವರಿಗೆ ತಮ್ಮದೇ ಆದ ಇತಿಹಾಸವಿದೆ, ತಮ್ಮದೇ ಆದ ಸಂಪ್ರದಾಯವಿದೆ, ತಮ್ಮದೇ ಆದ ಭಾಷೆ ಇದೆ. ಅವುಗಳೆಲ್ಲವೂ ಇತರರಂತೆ ಮುಖ್ಯ ಎಂದು ರಾಗಾ ಹೇಳಿದರು.

andolana

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

6 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

6 hours ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

7 hours ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

7 hours ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

7 hours ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

7 hours ago