ದೇಶ- ವಿದೇಶ

ಕೆಲ ಧರ್ಮ, ಭಾಷೆ ಮತ್ತು ಸಮುದಾಯಗಳು ಕೀಳು ಎಂದು ಆರ್‌ಎಸ್‌ಎಸ್‌ ಭಾವಿಸುತ್ತದೆ: ರಾಹುಲ್‌ ಗಾಂಧಿ

ವಾಷಿಂಗ್ಟನ್:‌ ಅಮೆರಿಕಾ ಪ್ರವಾಸದಲ್ಲಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ವಾಷಿಂಗ್ಟನ್‌ನ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿ ಆರ್‌ಎಸ್‌ಎಸ್‌ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ.

ಆರ್‌ಎಸ್‌ಎಸ್‌ ಕೆಲ ಧರ್ಮಗಳು, ಭಾಷೆಗಳು ಮತ್ತು ಸಮುದಾಯಗಳನ್ನು ಇತರರಿಗಿಂತ ಕೀಳು ಎಂದು ಪರಿಗಣಿಸುತ್ತದೆ ಎಂದು ಟೀಕಿಸಿದ ರಾಹುಲ್‌ ಗಾಂಧಿ ಭಾರತದಲ್ಲಿ ಹೋರಾಟ ಇದರ ಬಗ್ಗೆಯೇ ಹೊರತು ರಾಜಕೀಯದ ಬಗ್ಗೆ ಅಲ್ಲ ಎಂದು ಹೇಳಿದರು.

ದೇಶದಲ್ಲಿ ಹೋರಾಟ ರಾಜಕೀಯಕ್ಕೆ ಸಂಬಂಧಿಸಿದ್ದು ಎಂದು ಮೇಲ್ನೋಟಕ್ಕೆ ಕಾಣುತ್ತದೆ ಅಷ್ಟೇ. ಆದರೆ ಹೋರಾಟ ರಾಜಕೀಯಕ್ಕೆ ಸಂಬಂಧಿಸಿದ್ದಲ್ಲ ಎಂದ ರಾಹುಲ್‌ ಗಾಂಧಿ ಮುಂದಿನ ಸಾಲಿನಲ್ಲಿ ಕುಳಿತಿದ್ದ ಸಿಖ್‌ ಧರ್ಮೀಯರೊಬ್ಬರನ್ನು ಮಾತನಾಡಿಸಿ ತನ್ನ ಹೆಸರನ್ನು ಹೇಳುವಂತೆ ಕೇಳಿದರು.

ಟೋಪಿ ತೊಟ್ಟ ಅಣ್ಣ ನಿಮ್ಮ ಹೆಸರೇನು ಎಂದು ಕೇಳಿದ ರಾಗಾ ಭಾರತದಲ್ಲಿ ಸಿಖ್‌ ಜನರು ಪೇಟವನ್ನು ಧರಿಸಲು ಅನುಮತಿ ನೀಡಬಹುದೇ ಬೇಡವೇ ಅಥವಾ ಅವರು ಗುರುದ್ವಾರಕ್ಕೆ ಹೋಗುವುದು ಸಾಧ್ಯವೇ ಎಂಬುದಕ್ಕಾಗಿ ಹೋರಾಟಗಳು ನಡೆದಿವೆ. ಇದು ಕೇವಲ ಒಂದು ಧರ್ಮದಲ್ಲಿ ಮಾತ್ರವಲ್ಲ ಎಲ್ಲಾ ಧರ್ಮದಲ್ಲೂ ಇಂತಹ ಹೋರಾಟಗಳಿವೆ ಎಂದರು.

ಆರ್‌ಎಸ್‌ಎಸ್‌ ಕುರಿತು ಮಾತನಾಡಿದ ಅವರು ಕೆಲವು ರಾಜ್ಯಗಳು ಇತರೆ ರಾಜ್ಯಗಳಿಗಿಂತ ಕೀಳು, ಕೆಲವು ಧರ್ಮಗಳು ಇತರೆ ಧರ್ಮಗಳಿಗಿಂತ ಕೀಳು, ಕೆಲವು ಸಮುದಾಯಗಳು ಇತರೆ ಸಮುದಾಯಗಳಿಗಿಂತ ಕೀಳು ಎಂದು ಹೇಳುವುದು ಆರ್‌ಎಸ್‌ಎಸ್‌ನ ಸಿದ್ಧಾಂತವಾಗಿದೆ ಎಂದರು. ಲೋಕಸಭೆ, ವಿಧಾನಸಭೆ ಚುನಾವಣೆಗಳಲ್ಲಿ ಇಂತಹ ಟೀಕೆಗಳು, ಹೋರಾಟಗಳೇ ಕಂಡುಬರಲಿವೆ ಹೊರತು ಸೈದ್ಧಾಂತಿಕ ಹೋರಾಟಗಳಲ್ಲ ಎಂದರು.

ಅಲ್ಲದೇ ಹೋರಾಟ ನಾವು ಯಾವ ರೀತಿಯ ಭಾರತವನ್ನು ನಿರ್ಮಿಸಲಿದ್ದೇವೆ ಎಂಬುದರ ಕುರಿತು ಇರಬೇಕು. ಜನರು ಯಾವುದೇ ಪ್ರದೇಶಕ್ಕೆ ಸೇರಿದವರಾಗಿದ್ದರೂ, ಅವರಿಗೆ ತಮ್ಮದೇ ಆದ ಇತಿಹಾಸವಿದೆ, ತಮ್ಮದೇ ಆದ ಸಂಪ್ರದಾಯವಿದೆ, ತಮ್ಮದೇ ಆದ ಭಾಷೆ ಇದೆ. ಅವುಗಳೆಲ್ಲವೂ ಇತರರಂತೆ ಮುಖ್ಯ ಎಂದು ರಾಗಾ ಹೇಳಿದರು.

andolana

Recent Posts

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

2 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

4 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

4 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

5 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

9 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

9 hours ago