ಪಾಲಕ್ಕಾಡ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸುವಂತೆ ಜಾತಿ ಗಣತಿ ವಿಚಾರವಾಗಿ ಆರ್ಎಸ್ಎಸ್ ಮೊದಲ ಬಾರಿಗೆ ಪ್ರತಿಕ್ರಿಯಿಸಿದೆ. ಜಾತಿ ಆಧಾರಿತ ಗಣತಿಗೆ ಆರ್ಎಸ್ಎಸ್ ಬೆಂಬಲ ಸೂಚಿಸಿದೆ.
ಕೇರಳದ ಪಾಲಕ್ಕಾಡ್ ನಲ್ಲಿ ನಡೆದ ʻಸಮನ್ವೇ ಬೈಠಕ್ʼ ಎಂಬ ಮೂರು ದಿನಗಳ ಸಮನ್ವಯ ಸಮಾವೇಶದ ಬಳಿಕ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಚಾರ ಪ್ರಮುಖ ಸುನೀಲ್ ಅಂಬೇಕರ್, ಜಾತಿ ಆಧಾರತಿಯ ಗಣತಿಗೆ ಬೆಂಬಲವಿದೆ. ಆದರೆ, ಇದು ಕಲ್ಯಾಣ ಕಾರ್ಯಕ್ರಮಗಳಿಗೆ ಬಳಕೆಯಾಗಬೇಕೇ ವಿನಾ, ಚುನಾವಣಾ ಲಾಭಕ್ಕಾಗಿ ದುರ್ಬಳಕೆಯಾಗಬಾರದು ಎಂದು ಹೇಳಿದ್ದಾರೆ.
ಮುಂದುವರೆದು, ಜಾತಿ ಗಣತಿ ಬಹಳ ಸೂಕ್ಷ್ಮ ಸಂಗತಿ. ಹಿಂದೂ ಸಮಾಜದಲ್ಲಿ ನಾವು ಜಾತಿ ಹಾಗೂ ಜಾತಿ ಸಂಬಂಧಗಳ ಸೂಕ್ಷ್ಮ ಸಂಗತಿ ಹೊಂದಿದ್ದೇವೆ. ಹಾಗೆಯೇ ಇದು ನಮ್ಮ ರಾಷ್ಟ್ರೀಯ ಏಕತೆ ಮತ್ತು ಸಮಗ್ರತೆಗೆ ಮುಖ್ಯವಾಗಿದೆ. ಇದನ್ನು ಬಹಳ ಗಂಭೀರವಾಗಿ ನಿಭಾಯಿಸಬೇಕಾಗುತ್ತದೆ. ಕೆಲವು ಸಂದರ್ಭಗಳಲ್ಲಿ ಸರ್ಕಾರಕ್ಕೆ ಅಂಕಿ ಅಂಶಗಳು ಅಗತ್ಯವಾಗಿರುತ್ತದೆ. ಈ ಹಿಂದೆಯೂ ಇಂತಹ ಚಟುವಟಿಕೆಗಳನ್ನು ನಡೆಸಲಾಗಿತ್ತು ಎಂದು ಹೇಳಿದ್ದಾರೆ.
ಪರಿಣಾಮಕಾರಿ ನೀತಿ ನಿರೂಪಣೆಗಾಗಿ ಜಾತಿ ಗಣತಿಯನ್ನು ನಡೆಸಲು ಬಯಸುತ್ತಿರುವ ಕಾಂಗ್ರೆಸ್, ಸಮಾಜವಾಗಿ ಪಕ್ಷ ಮತ್ತು ಇತರ ಇಂಡಿಯಾ ಒಕ್ಕೂಟ ಮಿತ್ರಪಕ್ಷಗಳ ಒತ್ತಾಯದ ನಡುವೆ ಸುನೀಲ್ ಅಂಬೇಕರ್ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಕೋಳಿ ಫಾರಂ ಶೆಡ್ಗೆ ಬೆಂಕಿ ತಗುಲಿ ಸುಮಾರು 4…
ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…
ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…
ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…
ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್ಐಆರ್…
ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…