ಪಾಲಕ್ಕಾಡ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸುವಂತೆ ಜಾತಿ ಗಣತಿ ವಿಚಾರವಾಗಿ ಆರ್ಎಸ್ಎಸ್ ಮೊದಲ ಬಾರಿಗೆ ಪ್ರತಿಕ್ರಿಯಿಸಿದೆ. ಜಾತಿ ಆಧಾರಿತ ಗಣತಿಗೆ ಆರ್ಎಸ್ಎಸ್ ಬೆಂಬಲ ಸೂಚಿಸಿದೆ.
ಕೇರಳದ ಪಾಲಕ್ಕಾಡ್ ನಲ್ಲಿ ನಡೆದ ʻಸಮನ್ವೇ ಬೈಠಕ್ʼ ಎಂಬ ಮೂರು ದಿನಗಳ ಸಮನ್ವಯ ಸಮಾವೇಶದ ಬಳಿಕ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಚಾರ ಪ್ರಮುಖ ಸುನೀಲ್ ಅಂಬೇಕರ್, ಜಾತಿ ಆಧಾರತಿಯ ಗಣತಿಗೆ ಬೆಂಬಲವಿದೆ. ಆದರೆ, ಇದು ಕಲ್ಯಾಣ ಕಾರ್ಯಕ್ರಮಗಳಿಗೆ ಬಳಕೆಯಾಗಬೇಕೇ ವಿನಾ, ಚುನಾವಣಾ ಲಾಭಕ್ಕಾಗಿ ದುರ್ಬಳಕೆಯಾಗಬಾರದು ಎಂದು ಹೇಳಿದ್ದಾರೆ.
ಮುಂದುವರೆದು, ಜಾತಿ ಗಣತಿ ಬಹಳ ಸೂಕ್ಷ್ಮ ಸಂಗತಿ. ಹಿಂದೂ ಸಮಾಜದಲ್ಲಿ ನಾವು ಜಾತಿ ಹಾಗೂ ಜಾತಿ ಸಂಬಂಧಗಳ ಸೂಕ್ಷ್ಮ ಸಂಗತಿ ಹೊಂದಿದ್ದೇವೆ. ಹಾಗೆಯೇ ಇದು ನಮ್ಮ ರಾಷ್ಟ್ರೀಯ ಏಕತೆ ಮತ್ತು ಸಮಗ್ರತೆಗೆ ಮುಖ್ಯವಾಗಿದೆ. ಇದನ್ನು ಬಹಳ ಗಂಭೀರವಾಗಿ ನಿಭಾಯಿಸಬೇಕಾಗುತ್ತದೆ. ಕೆಲವು ಸಂದರ್ಭಗಳಲ್ಲಿ ಸರ್ಕಾರಕ್ಕೆ ಅಂಕಿ ಅಂಶಗಳು ಅಗತ್ಯವಾಗಿರುತ್ತದೆ. ಈ ಹಿಂದೆಯೂ ಇಂತಹ ಚಟುವಟಿಕೆಗಳನ್ನು ನಡೆಸಲಾಗಿತ್ತು ಎಂದು ಹೇಳಿದ್ದಾರೆ.
ಪರಿಣಾಮಕಾರಿ ನೀತಿ ನಿರೂಪಣೆಗಾಗಿ ಜಾತಿ ಗಣತಿಯನ್ನು ನಡೆಸಲು ಬಯಸುತ್ತಿರುವ ಕಾಂಗ್ರೆಸ್, ಸಮಾಜವಾಗಿ ಪಕ್ಷ ಮತ್ತು ಇತರ ಇಂಡಿಯಾ ಒಕ್ಕೂಟ ಮಿತ್ರಪಕ್ಷಗಳ ಒತ್ತಾಯದ ನಡುವೆ ಸುನೀಲ್ ಅಂಬೇಕರ್ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…