ದೇಶ- ವಿದೇಶ

ಜಾತಿ ಗಣತಿಗೆ ಆರ್‌ಎಸ್‌ಎಸ್‌ ಬೆಂಬಲ

ಪಾಲಕ್ಕಾಡ್:‌ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಒತ್ತಾಯಿಸುವಂತೆ ಜಾತಿ ಗಣತಿ ವಿಚಾರವಾಗಿ ಆರ್‌ಎಸ್‌ಎಸ್‌ ಮೊದಲ ಬಾರಿಗೆ ಪ್ರತಿಕ್ರಿಯಿಸಿದೆ. ಜಾತಿ ಆಧಾರಿತ ಗಣತಿಗೆ ಆರ್‌ಎಸ್‌ಎಸ್‌ ಬೆಂಬಲ ಸೂಚಿಸಿದೆ.

ಕೇರಳದ ಪಾಲಕ್ಕಾಡ್‌ ನಲ್ಲಿ ನಡೆದ ʻಸಮನ್ವೇ ಬೈಠಕ್‌ʼ ಎಂಬ ಮೂರು ದಿನಗಳ ಸಮನ್ವಯ ಸಮಾವೇಶದ ಬಳಿಕ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಆರ್‌ಎಸ್‌ಎಸ್‌ ಅಖಿಲ ಭಾರತೀಯ ಪ್ರಚಾರ ಪ್ರಮುಖ ಸುನೀಲ್‌ ಅಂಬೇಕರ್‌, ಜಾತಿ ಆಧಾರತಿಯ ಗಣತಿಗೆ ಬೆಂಬಲವಿದೆ. ಆದರೆ, ಇದು ಕಲ್ಯಾಣ ಕಾರ್ಯಕ್ರಮಗಳಿಗೆ ಬಳಕೆಯಾಗಬೇಕೇ ವಿನಾ, ಚುನಾವಣಾ ಲಾಭಕ್ಕಾಗಿ ದುರ್ಬಳಕೆಯಾಗಬಾರದು ಎಂದು ಹೇಳಿದ್ದಾರೆ.

ಮುಂದುವರೆದು, ಜಾತಿ ಗಣತಿ ಬಹಳ ಸೂಕ್ಷ್ಮ ಸಂಗತಿ. ಹಿಂದೂ ಸಮಾಜದಲ್ಲಿ ನಾವು ಜಾತಿ ಹಾಗೂ ಜಾತಿ ಸಂಬಂಧಗಳ ಸೂಕ್ಷ್ಮ ಸಂಗತಿ ಹೊಂದಿದ್ದೇವೆ. ಹಾಗೆಯೇ ಇದು ನಮ್ಮ ರಾಷ್ಟ್ರೀಯ ಏಕತೆ ಮತ್ತು ಸಮಗ್ರತೆಗೆ ಮುಖ್ಯವಾಗಿದೆ. ಇದನ್ನು ಬಹಳ ಗಂಭೀರವಾಗಿ ನಿಭಾಯಿಸಬೇಕಾಗುತ್ತದೆ. ಕೆಲವು ಸಂದರ್ಭಗಳಲ್ಲಿ ಸರ್ಕಾರಕ್ಕೆ ಅಂಕಿ ಅಂಶಗಳು ಅಗತ್ಯವಾಗಿರುತ್ತದೆ. ಈ ಹಿಂದೆಯೂ ಇಂತಹ ಚಟುವಟಿಕೆಗಳನ್ನು ನಡೆಸಲಾಗಿತ್ತು ಎಂದು ಹೇಳಿದ್ದಾರೆ.

ಪರಿಣಾಮಕಾರಿ ನೀತಿ ನಿರೂಪಣೆಗಾಗಿ ಜಾತಿ ಗಣತಿಯನ್ನು ನಡೆಸಲು ಬಯಸುತ್ತಿರುವ ಕಾಂಗ್ರೆಸ್‌, ಸಮಾಜವಾಗಿ ಪಕ್ಷ ಮತ್ತು ಇತರ ಇಂಡಿಯಾ ಒಕ್ಕೂಟ ಮಿತ್ರಪಕ್ಷಗಳ ಒತ್ತಾಯದ ನಡುವೆ ಸುನೀಲ್ ಅಂಬೇಕರ್‌ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

23 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

24 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

24 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

24 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

24 hours ago