Mysore
28
overcast clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

ಆರ್‌.ಎಸ್‌.ಎಸ್‌ ಬ್ರಿಟಿಷರ ಜೊತೆ ಶಾಮೀಲಾಗಿತ್ತು: ಭಾಗವತ್‌ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

ಹೊಸದಿಲ್ಲಿ: ಭಾರತದ ವೀರರು ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸುವಾಗ ಆರ್.‌ಎಸ್.ಎಸ್‌ ಬ್ರಿಟಿಷರ ಜೊತೆ ಶಾಮೀಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬುಧವಾರ ನವದೆಹಲಿಯಲ್ಲಿ,  ಆರ್ ಎಸ್ ಎಸ್  ಮೋಹನ್ ಭಾಗವತ್  ಆಯೋಧ್ಯೆಯ ರಾಮಮಂದಿರ ಪ್ರಾರಂಭವಾದ ದಿನ ದೇಶಕ್ಕೆ ನಿಜ ಅರ್ಥದಲ್ಲಿ ಸ್ವಾತಂತ್ರ್ಯ ಲಭಿಸಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಆರ್‌ಎಸ್‌ಎಸ್ ಭಾಗವಹಿಸಲಿಲ್ಲ.‌ ಶಾಮೀಲಾಗಿತ್ತು ಎಂದರು.

ಈ ಬಗ್ಗೆ ರಾಹುಲ್ ಗಾಂಧಿಯವರು ತಮ್ಮ ಭಾಷಣದಲ್ಲಿಯೂ ಪ್ರಸ್ತಾಪಿಸಿದ್ದರು. ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸದೇ ಆರ್ ಎಸ್ ಎಸ್ ಹಾಗೂ ಬಿಜೆಪಿಯವರು ಬ್ರಿಟೀಷರೊಂದಿಗೆ ಶಾಮೀಲಾಗಿದ್ದರು. ಮೋಹನ್ ಭಾಗವತರ ಹೇಳಿಕೆ ಸರಿಯಾದುದಲ್ಲ ಎಂದರು.

Tags:
error: Content is protected !!