ನವದೆಹಲಿ: ಭಾರತ ದೇಶದ ಇತಿಹಾಸದಲ್ಲಿ ಬ್ರಿಟಿಷರ ಆಳ್ವಿಕೆ ವಿರೋಧಿಸಿ ಅವರ ವಿರುದ್ಧ ಹೋರಾಟ ನಡೆಸಿದ ಕೀರ್ತಿ ಟಿಪ್ಪು ಸುಲ್ತಾನನಿಗೆ ಸಲ್ಲುತ್ತದೆ ಎಂದು ಭಾರತೀಯ ವಿದೇಶಾಂಗ ಸಚಿವ ಎಸ್.ಜೈಶಂಕರ್ ತಿಳಿಸಿದ್ದಾರೆ.
ಇತಿಹಾಸಕಾರ ವಿಕ್ರಂ ಸಂಪತ್ ರಚಿಸಿರುವ ಟಿಪ್ಪು ಸುಲ್ತಾನ್: ದಿ ಸಗಾ ಆಫ್ ದಿ ಮೈಸೂರು ಇಂಟರ್ಗ್ನಮ್ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ದಕ್ಷಿಣ ಭಾರತದ ಇತಿಹಾಸದಲ್ಲಿ ಟಿಪ್ಪು ಸುಲ್ತಾನ್ ಅತ್ಯಂತ ಸಂಕೀರ್ಣ ವ್ಯಕ್ತಿಯಾಗಿದ್ದರು. ಅವರು ತಮ್ಮ ಸಾವನ್ನು ಲೆಕ್ಕಿಸದೆ ಹೋರಾಟ ನಡೆಸಿದ ಕೀರ್ತಿ ಸಲ್ಲುತ್ತದೆ. ಆದರೆ ಆತನ ಸೋಲು ಹಾಗೂ ಸಾವು ಒಂದು ಮಹತ್ವದ ತಿರುವು ಪಡೆದಿದ್ದನ್ನು ಭಾರತೀಯ ಇತಿಹಾಸ ಪುಟಗಳಲ್ಲಿ ಕಾಣಬಹುದಾಗಿದೆ ಎಂದಿದ್ದಾರೆ.
ಟಿಪ್ಪು ಸುಲ್ತಾನ್ ತನ್ನ ಆಡಳಿತ ಕಾಲದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಮಾಡುವುದರಲ್ಲಿ ಹೆಚ್ಚು ಗಮನಹರಿಸಿದ್ದರಿಂದ ಇನ್ನಿತರ ಅಭಿವೃದ್ಧಿ ಕಾರ್ಯಗಳನ್ನು ಗಣನೆಗೆ ತೆಗೆದುಕೊಳ್ಳಲಿಲ್ಲ. ಟಿಪ್ಪು ಹೇಗೆ ತನ್ನ ಸಾಧನೆಗೆ ಪ್ರಮುಖ ಕಾರಣರಾಗಿದ್ದರೋ ಅದೇ ರೀತಿಯಲ್ಲಿ ವಿವಾದಾತ್ಮಕ ಅಂಶಗಳಿಗೂ ಕೆಲಸ ಮಾಡಿದ್ದಾರೆ. ಟಿಪ್ಪು ದೇಶಕ್ಕಾಗಿ ತಮ್ಮ ಮಕ್ಕಳನ್ನೇ ಅಡವಿಟ್ಟಿದ್ದರು ಎಂದು ಹೇಳಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…