ನವದೆಹಲಿ: ಭಾರತ ದೇಶದ ಇತಿಹಾಸದಲ್ಲಿ ಬ್ರಿಟಿಷರ ಆಳ್ವಿಕೆ ವಿರೋಧಿಸಿ ಅವರ ವಿರುದ್ಧ ಹೋರಾಟ ನಡೆಸಿದ ಕೀರ್ತಿ ಟಿಪ್ಪು ಸುಲ್ತಾನನಿಗೆ ಸಲ್ಲುತ್ತದೆ ಎಂದು ಭಾರತೀಯ ವಿದೇಶಾಂಗ ಸಚಿವ ಎಸ್.ಜೈಶಂಕರ್ ತಿಳಿಸಿದ್ದಾರೆ.
ಇತಿಹಾಸಕಾರ ವಿಕ್ರಂ ಸಂಪತ್ ರಚಿಸಿರುವ ಟಿಪ್ಪು ಸುಲ್ತಾನ್: ದಿ ಸಗಾ ಆಫ್ ದಿ ಮೈಸೂರು ಇಂಟರ್ಗ್ನಮ್ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ದಕ್ಷಿಣ ಭಾರತದ ಇತಿಹಾಸದಲ್ಲಿ ಟಿಪ್ಪು ಸುಲ್ತಾನ್ ಅತ್ಯಂತ ಸಂಕೀರ್ಣ ವ್ಯಕ್ತಿಯಾಗಿದ್ದರು. ಅವರು ತಮ್ಮ ಸಾವನ್ನು ಲೆಕ್ಕಿಸದೆ ಹೋರಾಟ ನಡೆಸಿದ ಕೀರ್ತಿ ಸಲ್ಲುತ್ತದೆ. ಆದರೆ ಆತನ ಸೋಲು ಹಾಗೂ ಸಾವು ಒಂದು ಮಹತ್ವದ ತಿರುವು ಪಡೆದಿದ್ದನ್ನು ಭಾರತೀಯ ಇತಿಹಾಸ ಪುಟಗಳಲ್ಲಿ ಕಾಣಬಹುದಾಗಿದೆ ಎಂದಿದ್ದಾರೆ.
ಟಿಪ್ಪು ಸುಲ್ತಾನ್ ತನ್ನ ಆಡಳಿತ ಕಾಲದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಮಾಡುವುದರಲ್ಲಿ ಹೆಚ್ಚು ಗಮನಹರಿಸಿದ್ದರಿಂದ ಇನ್ನಿತರ ಅಭಿವೃದ್ಧಿ ಕಾರ್ಯಗಳನ್ನು ಗಣನೆಗೆ ತೆಗೆದುಕೊಳ್ಳಲಿಲ್ಲ. ಟಿಪ್ಪು ಹೇಗೆ ತನ್ನ ಸಾಧನೆಗೆ ಪ್ರಮುಖ ಕಾರಣರಾಗಿದ್ದರೋ ಅದೇ ರೀತಿಯಲ್ಲಿ ವಿವಾದಾತ್ಮಕ ಅಂಶಗಳಿಗೂ ಕೆಲಸ ಮಾಡಿದ್ದಾರೆ. ಟಿಪ್ಪು ದೇಶಕ್ಕಾಗಿ ತಮ್ಮ ಮಕ್ಕಳನ್ನೇ ಅಡವಿಟ್ಟಿದ್ದರು ಎಂದು ಹೇಳಿದ್ದಾರೆ.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…