ದೇಶ- ವಿದೇಶ

ದೇಶದಲ್ಲಿ ಬ್ರಿಟಿಷರ ಆಳ್ವಿಕೆ ವಿರೋಧಿಸಿದ ಕೀರ್ತಿ ಟಿಪ್ಪು ಸುಲ್ತಾನನಿಗೆ ಸಲ್ಲುತ್ತದೆ: ಜೈ.ಶಂಕರ್‌

ನವದೆಹಲಿ: ಭಾರತ ದೇಶದ ಇತಿಹಾಸದಲ್ಲಿ ಬ್ರಿಟಿಷರ ಆಳ್ವಿಕೆ ವಿರೋಧಿಸಿ ಅವರ ವಿರುದ್ಧ ಹೋರಾಟ ನಡೆಸಿದ ಕೀರ್ತಿ ಟಿಪ್ಪು ಸುಲ್ತಾನನಿಗೆ ಸಲ್ಲುತ್ತದೆ ಎಂದು ಭಾರತೀಯ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ತಿಳಿಸಿದ್ದಾರೆ.

ಇತಿಹಾಸಕಾರ ವಿಕ್ರಂ ಸಂಪತ್‌ ರಚಿಸಿರುವ ಟಿಪ್ಪು ಸುಲ್ತಾನ್‌: ದಿ ಸಗಾ ಆಫ್‌ ದಿ ಮೈಸೂರು ಇಂಟರ್‌ಗ್ನಮ್‌ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ದಕ್ಷಿಣ ಭಾರತದ ಇತಿಹಾಸದಲ್ಲಿ ಟಿಪ್ಪು ಸುಲ್ತಾನ್‌ ಅತ್ಯಂತ ಸಂಕೀರ್ಣ ವ್ಯಕ್ತಿಯಾಗಿದ್ದರು. ಅವರು ತಮ್ಮ ಸಾವನ್ನು ಲೆಕ್ಕಿಸದೆ ಹೋರಾಟ ನಡೆಸಿದ ಕೀರ್ತಿ ಸಲ್ಲುತ್ತದೆ. ಆದರೆ ಆತನ ಸೋಲು ಹಾಗೂ ಸಾವು ಒಂದು ಮಹತ್ವದ ತಿರುವು ಪಡೆದಿದ್ದನ್ನು ಭಾರತೀಯ ಇತಿಹಾಸ ಪುಟಗಳಲ್ಲಿ ಕಾಣಬಹುದಾಗಿದೆ ಎಂದಿದ್ದಾರೆ.

ಟಿಪ್ಪು ಸುಲ್ತಾನ್‌ ತನ್ನ ಆಡಳಿತ ಕಾಲದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಮಾಡುವುದರಲ್ಲಿ ಹೆಚ್ಚು ಗಮನಹರಿಸಿದ್ದರಿಂದ ಇನ್ನಿತರ ಅಭಿವೃದ್ಧಿ ಕಾರ್ಯಗಳನ್ನು ಗಣನೆಗೆ ತೆಗೆದುಕೊಳ್ಳಲಿಲ್ಲ. ಟಿಪ್ಪು ಹೇಗೆ ತನ್ನ ಸಾಧನೆಗೆ ಪ್ರಮುಖ ಕಾರಣರಾಗಿದ್ದರೋ ಅದೇ ರೀತಿಯಲ್ಲಿ ವಿವಾದಾತ್ಮಕ ಅಂಶಗಳಿಗೂ ಕೆಲಸ ಮಾಡಿದ್ದಾರೆ. ಟಿಪ್ಪು ದೇಶಕ್ಕಾಗಿ ತಮ್ಮ ಮಕ್ಕಳನ್ನೇ ಅಡವಿಟ್ಟಿದ್ದರು ಎಂದು ಹೇಳಿದ್ದಾರೆ.

 

 

 

ಅರ್ಚನ ಎಸ್‌ ಎಸ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

8 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

10 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

10 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

11 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

14 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

14 hours ago