ನವದೆಹಲಿ: ಗಡಿಪಾರು ಮಾಡುವುದು ಹೊಸದೇನು ಅಲ್ಲ, ಅಕ್ರಮ ವಲಸೆ ತಡೆಯುವ ಅಗತ್ಯವಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್ ತಿಳಿಸಿದರು.
ರಾಜ್ಯಸಭೆಯಲ್ಲಿ ಇಂದು(ಫೆಬ್ರವರಿ.6) ಈ ಕುಇತು ಭಾಷಣ ಮಾಡಿದ ಅವರು, ಬುಧವಾರದಂದು(ಫೆ.5) ಅಮೆರಿಕಾದಿಂದ ಗಡಿಪಾರು ಮಾಡಲಾದ ೧೦೪ ಭಾರತೀಯರು ನಮ್ಮ ದೇಶಕ್ಕೆ ಹಿಂತಿರುವಾಗ ಕೆಟ್ಟದಾಗಿ ನಡೆಸಿಕೊಳ್ಳದಂತೆ ನೋಡಿಕೊಳ್ಳಲು ಅಮೆರಿಕಾ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು.
ಇನ್ನೂ ಅಕ್ರಮ ವಲಸಿಗರನ್ನು ದೇಶಗಳಿಗೆ ಗಡಿಪಾರು ಮಾಡುವ ಪ್ರಕ್ರಿಯೆ ಹೊಸದೇನು ಅಲ್ಲ. ಪ್ರತಿಯೊಂದು ದೇಶದಲ್ಲೂ ಅಕ್ರಮ ವಲಸೆ ತಡೆಯಬೇಕಿದೆ. ತಮ್ಮ ಪ್ರಜೆಗಳು ಎಲ್ಲಾ ದೇಶಗಳಲ್ಲಿ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ, ಅಂತಹವನ್ನು ವಾಪಾಸ್ ಕರೆಸಿಕೊಳ್ಳಬೇಕು. ಅಲ್ಲದೇ ನಮ್ಮ ದೇಶಕ್ಕೆ ಅಕ್ರಮವಾಗಿ ವಲಸೆ ಬರುತ್ತಿರುವವರನ್ನು ಸಹ ತಡೆಯಬೇಕಿದೆ. ಜೊತೆಗೆ ಪ್ರತಿಯೊಂದು ದೇಶಗಳಲ್ಲಿ ಅಕ್ರಮವಾಗಿ ವಾಸಿಸುತ್ತಿರುವುದು ಕಂಡುಬಂದರೆ ತಮ್ಮ ಪ್ರಜೆಗಳನ್ನು ವಾಪಾಸ್ ಕರೆಸಿಕೊಳ್ಳುವುದು ಎಲ್ಲಾ ದೇಶಗಳ ಬಾಧ್ಯತೆಯಾಗಿದೆ ಎಂದು ಹೇಳಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…