ದೇಶ- ವಿದೇಶ

ಶಬರಿಮಲೆ ಯಾತ್ರೆ ಆರಂಭ

ಶಬರಿಮಲೆ : ಹಿಂದೂಗಳ ಶ್ರದ್ದಾ ಧಾರ್ಮಿಕ ಕೇಂದ್ರವಾದ ಪವಿತ್ರ ಶಬರಿಮಲೆಯ ಅಯ್ಯಪ್ಪ ದೇವಾಲಯದ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಸೋಮವಾರದಿಂದ ಆರಂಭಗೊಂಡಿದೆ.

ಈ ಯಾತ್ರೆಯು ಒಟ್ಟು 41 ದಿನಗಳ ನಡೆಯಲಿದ್ದು, ಶಬರಿಮಲೆಯಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕಿನ ವೈರಸ್ ಹಬ್ಬಿರುವ ಬೆನ್ನಲ್ಲೇ ಅಯ್ಯಪ್ಪ ಸ್ವಾಮಿ ಭಕ್ತರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲನೆ ಮಾಡಬೇಕೆಂದು ಕೇರಳ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಶಬರಿಮಲೆಗೆ ಆಗಮಿಸುವ ಭಕ್ತರು ನದಿಯಲ್ಲಿ ತೀರ್ಥ ಸ್ನಾನ ಮಾಡುವಾಗ ಮೂಗಿಗೆ ನೀರು ಹೋಗದಂತೆ ಎಚ್ಚರವಹಿಸಬೇಕು. ಕುಡಿಯಲು ಬಿಸಿ ನೀರು, ಆಗಾಗ್ಗೆ ಕೈಗಳನ್ನು ಸ್ವಚ್ಚಗೊಳಿಸುತ್ತಿರುವುದು, ಎಲ್ಲೆಂದರಲ್ಲಿ ಉಗಿಯದಿರುವುದು, ಹಣ್ಣು, ತರಕಾರಿ, ತಿಂದಿ ಪದಾರ್ಥಗಳನ್ನು ಎಲ್ಲೆಂದರಲ್ಲಿ ತಿನ್ನಬಾರದೆಂದು ಸೂಚಿಸಿದೆ.

ಜೊತೆಗೆ ವಯಸ್ಸಾದವರು, ಹಿರಿಯರು ಬೆಟ್ಟ ಹತ್ತುವಾಗ ಸುಸ್ತಾದರೆ ಎಲ್ಲಿ ಸಾಧ್ಯವೇ ಅಲ್ಲಿಯೇ ವಿಶ್ರಾಂತಿ ಪಡೆಯಬೇಕು. ತಾತ್ಕಾಲಿಕವಾಗಿ ನಿರ್ಮಾಣ ಮಾಡಿರುವ ಶೌಚಾಲಯಗಳನ್ನು ಬಳಸುವುದು ಸೇರಿದಂತೆ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಸೂಚಿಸಲಾಗಿದೆ.

ಇದನ್ನು ಓದಿ: ಮೈಸೂರು| ಶಬರಿಮಲೆ ಯಾತ್ರಾರ್ಥಿಗಳಿಗೆ ಉಚಿತ ಆಂಬುಲೆನ್ಸ್ ವ್ಯವಸ್ಥೆ

ಎರಡು ತಿಂಗಳ ಕಾಲ ನಡೆಯುವ ಈ ವಾರ್ಷಿಕ ತೀರ್ಥಯಾತ್ರೆ ಜನವರಿ 26ರವರೆಗೆ ಮುಂದುವರಿಯುತ್ತದೆ. ಮೊದಲ ದಿನವೇ ಹೆಚ್ಚಿನ ಸಂಖ್ಯೆಯ ಭಕ್ತರು ಪವಿತ್ರ ಬೆಟ್ಟದ ದೇವಾಲಯಕ್ಕೆ ಆಗಮಿಸಿದ್ದಾರೆ.

ಅಧಿಕಾರಿಗಳು ಮರಕೂಟಂನಿಂದ ಸನ್ನಿಧಾನಂವರೆಗಿನ ಚಂದ್ರನಂದನ್ ರಸ್ತೆಯ ಉದ್ದಕ್ಕೂ ಚಾರಣ ಮಾರ್ಗ ಮತ್ತು ಬೆಂಚುಗಳೊಂದಿಗೆ ಸಿದ್ಧರಾಗಿದ್ದಾರೆ.ಭಕ್ತರು ವಿಶ್ರಾಂತಿ ಪಡೆಯಲು ಹೆಚ್ಚುವರಿ ಆಸನ ಸೌಲಭ್ಯಗಳನ್ನು ಒದಗಿಸಲು ವಲಿಯನಾಡಪಂದಲ್ ಮತ್ತು ಸರಮಕುತಿ ನಡುವಿನ ಸರತಿ ಸಾಲಿನ ಸಂಕೀರ್ಣದ ಎರಡೂ ಬದಿಗಳಲ್ಲಿ 400 ಮೀಟರ್ ತಡೆಗೋಡೆಯನ್ನು ನಿರ್ಮಿಸಲಾಗಿದೆ.

ಇದಲ್ಲದೆ, ಪಂಬಾ ಮತ್ತು ಸನ್ನಿಧಾನಂ ನಡುವೆ ಬಿಸಿ ಕುಡಿಯುವ ನೀರಿನ ಕಿಯೋಸ್ಕ್‍ಗಳು ಮತ್ತು 56 ಶುಂಠಿ ನೀರು ವಿತರಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಯಾತ್ರಾರ್ಥಿಗಳ ದೈನಂದಿನ ಸಂಖ್ಯೆಯ ಮೇಲೆ ಮಿತಿ ವಿಧಿಸಲಾಗಿದೆ. ವರ್ಚುವಲ್ ಕ್ಯೂ ವ್ಯವಸ್ಥೆಯ ಮೂಲಕ ಒಟ್ಟು 90,000-70,000 ಭಕ್ತರಿಗೆ ಮತ್ತು ಸ್ಪಾಟ್ ಬುಕಿಂಗ್ ಮೂಲಕ 20,000 ಭಕ್ತರಿಗೆ ಪ್ರತಿದಿನ ಅವಕಾಶ ನೀಡಲಾಗುವುದು ಎಂದು ಪಿಟಿಐ ವರದಿ ಮಾಡಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

8 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

8 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

9 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

9 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

9 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

10 hours ago