ದೇಶ- ವಿದೇಶ

ಶಬರಿಮಲೆ ಯಾತ್ರೆ ಆರಂಭ

ಶಬರಿಮಲೆ : ಹಿಂದೂಗಳ ಶ್ರದ್ದಾ ಧಾರ್ಮಿಕ ಕೇಂದ್ರವಾದ ಪವಿತ್ರ ಶಬರಿಮಲೆಯ ಅಯ್ಯಪ್ಪ ದೇವಾಲಯದ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಸೋಮವಾರದಿಂದ ಆರಂಭಗೊಂಡಿದೆ.

ಈ ಯಾತ್ರೆಯು ಒಟ್ಟು 41 ದಿನಗಳ ನಡೆಯಲಿದ್ದು, ಶಬರಿಮಲೆಯಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕಿನ ವೈರಸ್ ಹಬ್ಬಿರುವ ಬೆನ್ನಲ್ಲೇ ಅಯ್ಯಪ್ಪ ಸ್ವಾಮಿ ಭಕ್ತರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲನೆ ಮಾಡಬೇಕೆಂದು ಕೇರಳ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಶಬರಿಮಲೆಗೆ ಆಗಮಿಸುವ ಭಕ್ತರು ನದಿಯಲ್ಲಿ ತೀರ್ಥ ಸ್ನಾನ ಮಾಡುವಾಗ ಮೂಗಿಗೆ ನೀರು ಹೋಗದಂತೆ ಎಚ್ಚರವಹಿಸಬೇಕು. ಕುಡಿಯಲು ಬಿಸಿ ನೀರು, ಆಗಾಗ್ಗೆ ಕೈಗಳನ್ನು ಸ್ವಚ್ಚಗೊಳಿಸುತ್ತಿರುವುದು, ಎಲ್ಲೆಂದರಲ್ಲಿ ಉಗಿಯದಿರುವುದು, ಹಣ್ಣು, ತರಕಾರಿ, ತಿಂದಿ ಪದಾರ್ಥಗಳನ್ನು ಎಲ್ಲೆಂದರಲ್ಲಿ ತಿನ್ನಬಾರದೆಂದು ಸೂಚಿಸಿದೆ.

ಜೊತೆಗೆ ವಯಸ್ಸಾದವರು, ಹಿರಿಯರು ಬೆಟ್ಟ ಹತ್ತುವಾಗ ಸುಸ್ತಾದರೆ ಎಲ್ಲಿ ಸಾಧ್ಯವೇ ಅಲ್ಲಿಯೇ ವಿಶ್ರಾಂತಿ ಪಡೆಯಬೇಕು. ತಾತ್ಕಾಲಿಕವಾಗಿ ನಿರ್ಮಾಣ ಮಾಡಿರುವ ಶೌಚಾಲಯಗಳನ್ನು ಬಳಸುವುದು ಸೇರಿದಂತೆ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಸೂಚಿಸಲಾಗಿದೆ.

ಇದನ್ನು ಓದಿ: ಮೈಸೂರು| ಶಬರಿಮಲೆ ಯಾತ್ರಾರ್ಥಿಗಳಿಗೆ ಉಚಿತ ಆಂಬುಲೆನ್ಸ್ ವ್ಯವಸ್ಥೆ

ಎರಡು ತಿಂಗಳ ಕಾಲ ನಡೆಯುವ ಈ ವಾರ್ಷಿಕ ತೀರ್ಥಯಾತ್ರೆ ಜನವರಿ 26ರವರೆಗೆ ಮುಂದುವರಿಯುತ್ತದೆ. ಮೊದಲ ದಿನವೇ ಹೆಚ್ಚಿನ ಸಂಖ್ಯೆಯ ಭಕ್ತರು ಪವಿತ್ರ ಬೆಟ್ಟದ ದೇವಾಲಯಕ್ಕೆ ಆಗಮಿಸಿದ್ದಾರೆ.

ಅಧಿಕಾರಿಗಳು ಮರಕೂಟಂನಿಂದ ಸನ್ನಿಧಾನಂವರೆಗಿನ ಚಂದ್ರನಂದನ್ ರಸ್ತೆಯ ಉದ್ದಕ್ಕೂ ಚಾರಣ ಮಾರ್ಗ ಮತ್ತು ಬೆಂಚುಗಳೊಂದಿಗೆ ಸಿದ್ಧರಾಗಿದ್ದಾರೆ.ಭಕ್ತರು ವಿಶ್ರಾಂತಿ ಪಡೆಯಲು ಹೆಚ್ಚುವರಿ ಆಸನ ಸೌಲಭ್ಯಗಳನ್ನು ಒದಗಿಸಲು ವಲಿಯನಾಡಪಂದಲ್ ಮತ್ತು ಸರಮಕುತಿ ನಡುವಿನ ಸರತಿ ಸಾಲಿನ ಸಂಕೀರ್ಣದ ಎರಡೂ ಬದಿಗಳಲ್ಲಿ 400 ಮೀಟರ್ ತಡೆಗೋಡೆಯನ್ನು ನಿರ್ಮಿಸಲಾಗಿದೆ.

ಇದಲ್ಲದೆ, ಪಂಬಾ ಮತ್ತು ಸನ್ನಿಧಾನಂ ನಡುವೆ ಬಿಸಿ ಕುಡಿಯುವ ನೀರಿನ ಕಿಯೋಸ್ಕ್‍ಗಳು ಮತ್ತು 56 ಶುಂಠಿ ನೀರು ವಿತರಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಯಾತ್ರಾರ್ಥಿಗಳ ದೈನಂದಿನ ಸಂಖ್ಯೆಯ ಮೇಲೆ ಮಿತಿ ವಿಧಿಸಲಾಗಿದೆ. ವರ್ಚುವಲ್ ಕ್ಯೂ ವ್ಯವಸ್ಥೆಯ ಮೂಲಕ ಒಟ್ಟು 90,000-70,000 ಭಕ್ತರಿಗೆ ಮತ್ತು ಸ್ಪಾಟ್ ಬುಕಿಂಗ್ ಮೂಲಕ 20,000 ಭಕ್ತರಿಗೆ ಪ್ರತಿದಿನ ಅವಕಾಶ ನೀಡಲಾಗುವುದು ಎಂದು ಪಿಟಿಐ ವರದಿ ಮಾಡಿದೆ.

ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

5 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

5 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

10 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

10 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago