ದೇಶ- ವಿದೇಶ

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇತ್ತೀಚೆಗಷ್ಟೆ ಸಲ್ಮಾನ್‌ ಖಾನ್‌ ಅಪಾರ್ಟ್‌ಮೆಂಟ್‌ ಮೇಲೆ ಕಿಡಿಗೇಡಿಗಳು ಗುಂಡಿನ ದಾಳಿ ನಡೆಸಿದ್ದರು. ಕುಖ್ಯಾತ ಗ್ಯಾಂಗ್‌ ಸ್ಟಾರ್‌ ಲಾರೆನ್ಸ್‌ ಬಿಷ್ಣೋಯ್‌ ಮೇರೆಗೆ ನಡೆದಿತ್ತು.

ಇದೀಗ ಸಲ್ನಾನ್‌ ಖಾನ್‌ ತಂದೆ, ಹೆಸರಾಂತ ಚಿತ್ರಕಥೆಗಾರ ಸಲೀಮ್‌ ಖಾನ್‌ ಅವರಿಗೂ ಬೆದರಿಕೆ ಬಂದಿದೆ. ಎಂದಿನಂತೆ ಸಲೀಮ್‌ ಖಾನ್‌ ಬೆಳಗಿನ ವಾಕ್‌ ಮುಗಿಸಿ, ಮುಂಬೈನ ಬಾಂದ್ರಾದ ಬ್ಯಾಂಡ್‌ಸ್ಟ್ಯಾಂಡ್‌ ವಾಯುವಿಹಾರ ಪ್ರದೇಶದಲ್ಲಿ ಕುಳಿತಿದ್ದಾಗ ಬೆದರಿಕೆ ಹಾಕಿದ್ದಾರೆ. ಜೈಲಿನಲ್ಲಿರುವ ಲಾರೆನ್ಸ್‌ ಬಿಷ್ಣೋಯ್‌ ಹೆಸರು ಉಲ್ಲೇಖಿಸಿ ಬೆದರಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆ ಮತ್ತು ವ್ಯಕ್ತಿಯು ಸಲೀಮ್‌ ಖಾನ್‌ ಅವರನ್ನು ನೋಡಿ, ವಾಹನ ನಿಲ್ಲಿಸಿ, ನಿನ್ನ ಬಳಿಗೆ ಲಾರೆನ್ಸ್‌ ಬಿಷ್ಣೋಯಿಯನ್ನ ಕಳುಹಿಸಬೇಕಾ? ಎಂದು ಪ್ರಶ್ನಿಸಿದ್ದಾರೆ. ಬಳಿಕ ಅವರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ವಾಹನದ ನಂಬರ್‌ ಗಮನಿಸಿದ ಬಾಡಿಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ಅವರನ್ನು ಬಂಧಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಎಂಗೆ ವಿದ್ಯಾರ್ಥಿಗಳು ಪತ್ರ ಬರೆದ ಪ್ರಕರಣ: ಪಚ್ಚೆದೊಡ್ಡಿ ಸರ್ಕಾರಿ ಶಾಲೆಗೆ ಬಿಇಒ ಭೇಟಿ

ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…

2 hours ago

ಕೋಟೆ ಪುರಸಭೆ ಪೌರಕಾರ್ಮಿಕರು, ನೌಕರರಿಗೆ ೫ ತಿಂಗಳಿಂದ ಸಂಬಳವಿಲ್ಲ

ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…

2 hours ago

ಕೈಬೀಸಿ ಕರೆಯುತ್ತಿದೆ ‘ಪ್ರಸಾರಾಂಗ ಪುಸ್ತಕೋತ್ಸವ’

ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…

2 hours ago

ನಗರಪಾಲಿಕೆ ಆರ್ಥಿಕ ಬರ ನೀಗಿಸಿದ ತೆರಿಗೆ ಸಂಗ್ರಹ

ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…

2 hours ago

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

13 hours ago