ದೇಶ- ವಿದೇಶ

ಸೈಬರ್ ಭದ್ರತೆ ಮತ್ತು ಸುರಕ್ಷತಾ ಆಪ್ ವಿವಾದದ ನಡುವೆ ಸಂಚಾರ ಸಾಥಿ ಆಪ್ ಬಳಕೆ 10 ಪಟ್ಟು ಹೆಚ್ಚಳ

ಹೊಸದಿಲ್ಲಿ : ಸೈಬರ್ ಭದ್ರತೆ ಮತ್ತು ಸುರಕ್ಷತಾ ಆಪ್ ಆದ ʻಸಂಚಾರ ಸಾಥಿʻ ಪರ-ವಿರೋದದ ಚರ್ಚೆಯ ನಡುವೆ, ಡಿ.೨ರಂದು ಒಂದೇ ದಿನ ಶೇಕಡಾ ೧೦ ರಷ್ಟು ಡೌನ್‌ಲೋಡ್ ಕಂಡಿದೆ ಎಂದು ದೂರಸಂಪರ್ಕ ಇಲಾಖೆ ಬುಧವಾರ ತಿಳಿಸಿದೆ.

ಸೈಬರ್ ಭದ್ರತೆ ಹಿನ್ನೆಲೆ ಆಪ್ ಅನ್ನು ಹೊಸ ಮೊಬೈಲ್‌ಗಳಲ್ಲಿ ಕಡ್ಡಾಯವಾಗಿ ಅಳವಡಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನು ವಿಪಕ್ಷಗಳು ತೀವ್ರವಾಗಿ ಟೀಕಿಸಿ, ಇದು ಜನರ ಮೇಲೆ ಗೂಢಾಚಾರಿಕೆ ನಡೆಸಲು ಮತ್ತು ಖಾಸಗಿತನಕ್ಕೆ ಧಕ್ಕೆ ತರುವ ಉದ್ದೇಶ ಹೊಂದಿದೆ ಎಂದು ವಿರೋಧಿಸಿದ್ದವು.

ಆಪ್ ಕುರಿತು ಕೇಂದ್ರ ಸರ್ಕಾರ ಮತ್ತು ವಿಪಕ್ಷಗಳು ಪರಸ್ಪರ ವಾಗ್ವಾದ ನಡೆಸಿದ್ದವು. ಇದರ ನಡುವೆಯೇ, ಆಪ್ ಬಳಕೆದಾರರ ಸಂಖ್ಯೆ ಒಂದೇ ದಿನದಲ್ಲಿ ೧೦ ಪಟ್ಟು ಹೆಚ್ಚಾಗಿದೆ. ವಿವಾದಕ್ಕೂ ಮೊದಲು ಆಪ್ ಬಳಕೆಯು ದೈನಂದಿನ ಸರಾಸರಿ ೬೦ ಸಾವಿರ ಇತ್ತು. ಬಳಿಕ ಇದು ೬ ಲಕ್ಷಕ್ಕೆ ಏರಿದೆ. ಕೇಂದ್ರ ಸರ್ಕಾರ ಆದೇಶ ಹೊರಡಿಸುವ ಮೊದಲೇ ೧.೫ ಕೋಟಿ ಜನರು ಅಪ್ಲಿಕೇಶನ್ ಅನ್ನು ಬಳಕೆ ಮಾಡುತ್ತಿದ್ದರು ಎಂದು ದೂರಸಂಪರ್ಕ ಇಲಾಖೆ ತಿಳಿಸಿದೆ.

ಸಚಿವಾಲಯ ಸ್ಪಷ್ಟನೆ ಹೀಗಿದೆ
ಸಂಚಾರ ಸಾಥಿ ಅಪ್ಲಿಕೇಶನ್ ಬಗ್ಗೆ ಕೇಳಿ ಬಂದ ವಿವಾದದ ಕುರಿತು ಸ್ಪಷ್ಟನೆ ನೀಡಿದ್ದ ದೂರಸಂಪರ್ಕ ಇಲಾಖೆ, ಆಪ್ ಅನ್ನು ಮೊಬೈಲ್ ಫೋನ್‌ಗಳಲ್ಲಿ ಮೊದಲೇ ಸ್ಥಾಪಿಸಲ್ಪಡುತ್ತದೆ. ಆದರೆ, ಅದು ಜನರ ಮೇಲೆ ಬೇಹುಗಾರಿಕೆ ನಡೆಸುತ್ತದೆ ಎಂದು ಅರ್ಥವಲ್ಲ. ಇದು ಕಣ್ಗಾವಲು ಸಾಧನವಾಗಿ ಕಾರ್ಯನಿರ್ವಹಿಸುವುದಿಲ್ಲ ಮತ್ತು ಇದು ನಿಮ್ಮ ಡೇಟಾವನ್ನು ಯಾವುದೇ ರೀತಿಯಲ್ಲಿ ಟ್ರ್ಯಾಕ್ ಮಾಡುವುದಿಲ್ಲ. ವೈಯಕ್ತಿಕ ಮಾಹಿತಿಯನ್ನು ಪ್ರವೇಶಿಸದೇ ನಿಮ್ಮ ಮೊಬೈಲ್ ಗುರುತನ್ನು ರಕ್ಷಿಸುವುದು ಇದರ ಏಕೈಕ ಉದ್ದೇಶ ಎಂದು ದೃಢಪಡಿಸಿತ್ತು.

ಇದನ್ನೂ ಓದಿ:-ಪವರ್‌ ಶೇರಿಂಗ್‌ ವಿಚಾರ : ಸ್ಫೋಟಕ ಮಾಹಿತಿ ಹೊರ ಹಾಕಿದ ಸಚಿವ ಜಾರಕಿ ಹೊಳಿ

ಕೇಂದ್ರ ಟೆಲಿಕಾಂ ಸಚಿವ ಜ್ಯೋತಿರಾದಿತ್ಯ ಸಿಂಽಯಾ ಕೂಡ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಮೊಬೈಲ್ ನಲ್ಲಿ ಆಪ್ ಅಳವಡಿಕೆ ಕಡ್ಡಾಯವಲ್ಲ. ಬಳಕೆದಾರರಿಗೆ ಬೇಡವೆನಿಸಿದಾಗ ಅದನ್ನು ಡಿಲೀಟ್ ಮಾಡಬಹುದು. ಒಂದು ವೇಳೆ ನಿಮ್ಮ ಮೊಬೈಲ್‌ನಲ್ಲಿ ಸಂಚಾರ್ ಸಾಥಿ ಆಪ್ ಅಳವಡಿಕೆ ಆಗಿದ್ದರೆ ಅದನ್ನು ಬೇಕಾದವರು ಮುಂದುವರಿಸಬಹುದು. ಈ ಆಪ್ ವಂಚನೆ ಮತ್ತು ಸೈಬರ್ ಅಪರಾಧಗಳಿಂದ ಜನರನ್ನು ರಕ್ಷಿಸಲು ಅಸ್ತಿತ್ವದಲ್ಲಿದೆ. ಇದು ದೇಶದ ತುಂಬಾ ಜನರಿಗೆ ಗೊತ್ತಿಲ್ಲ ಎಂದರು.

‘ಸೈಬರ್ ಅಪರಾಧಗಳು ಹೆಚ್ಚುತ್ತಿರುವ ಹಿನ್ನೆಲೆ, ಸುರಕ್ಷತೆಯ ದೃಷ್ಟಿಯಿಂದ ಈ ಆಪ್ ಎಲ್ಲರಿಗೂ ತಲುಪುವಂತೆ ಮಾಡುವುದು ನಮ್ಮ ಜವಾಬ್ದಾರಿ. ನೀವು ಅದನ್ನು ಅಳಿಸಲು ಬಯಸಿದರೆ, ಡಿಲೀಟ್ ಮಾಡಿ. ಬಳಸಲು ಬಯಸಿದರೆ ಅದರಲ್ಲಿ ನೋಂದಣಿ ಮಾಡಿಕೊಳ್ಳಿ. ಬಳಕೆದಾರರಿಗೆ ಸಂಪೂರ್ಣ ಸ್ವಾತಂತ್ರ್ಯವಿದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

8 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

9 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

9 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

9 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

9 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

9 hours ago