ದೇಶ- ವಿದೇಶ

ಆರ್‌ಬಿಐ ನೂತನ ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ನೇಮಕ

ನವದೆಹಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌ಗೆ ನೂತನ ಗವರ್ನರ್‌ ಆಗಿ ಕೇಂದ್ರ ಸಚಿವಾಲಯದ ಕಾರ್ಯದರ್ಶಿಯಾಗಿರುವ ಸಂಜಯ್‌ ಮಲ್ಹೋತ್ರಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಪ್ರಸ್ತುತ ಗವರ್ನರ್‌ ಆಗಿರುವ ಶಕ್ತಿಕಾಂತ್‌ ದಾಸ್‌ ಅವರ ಸೇವಾವಧಿ ನಾಳೆಗೆ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್‌.11ರಂದು ಸಂಜಯ್‌ ಮಲ್ಹೋತ್ರಾ ಅವರು, ಆರ್‌ಬಿಐ ನೂತನ ಗವರ್ನರ್‌ ಆಗಿ ತಮ್ಮ ಕಾರ್ಯ ಆರಂಭಿಸಲಿದ್ದಾರೆ. ಮೂರು ವರ್ಷಗಳ ಕಾಲ ಅವರು ಅಧಿಕಾರದಲ್ಲಿರುತ್ತಾರೆ.

ಸಂಜಯ್‌ ಮಲ್ಹೋತ್ರಾ ಅವರು ರಾಜಸ್ಥಾನದ ಕೇಡರ್‌ನ 1990ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿದ್ದಾರೆ. ಐಐಟಿ ಕಾನ್ಪುರ್‌ನಲ್ಲಿ ಕಂಪ್ಯೂಟರ್‌ ಸೈನ್ಸ್‌ ಎಂಜಿನಿಯರಿಂಗ್‌ ಮಾಡಿದ್ದು, ಅಮೇರಿಕಾದ ಪ್ರಿನ್ಸ್‌ಟನ್‌ ಯೂನಿವರ್ಸಿಟಿಯ ಆಫ್‌ ಪಬ್ಲಿಕ್‌ನಲ್ಲಿ ಸ್ನಾತಕೋತ್ತರ ವ್ಯಾಸಂಗ ಮುಗಿಸಿದ್ದಾರೆ.

ಈ ಹಿಂದೆ ಸರ್ಕಾರಿ ಸ್ವಾಮ್ಯದ ಆರ್‌ಇಸಿ ಛೇರ್ಮನ್‌ ಆಗಿ ಕಾರ್ಯ ನಿರ್ವಹಿಸಿದ್ದು, ಜಿಎಸ್‌ಟಿ ಮಂಡಳಿಯಲ್ಲೂ ಕೆಲಸ ಮಾಡಿದ್ದಾರೆ. ಇವರಿಗೆ ವಿದ್ಯುತ್‌, ತೆರಿಗೆ, ಹಣಕಾಸು, ಐಟಿ, ಗಣಿಗಳಲ್ಲಿ ಕೆಲಸ ಮಾಡಿದ ಅನುಭವವಿದೆ. ಸದ್ಯ ಹಣಕಾಸು ಸಚಿವಾಲಯದಲ್ಲಿ ರೆವೆನ್ಯೂ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ವಿದ್ಯುತ್‌ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿದ್ದ ಸಂಜಯ್‌ ಮಲ್ಹೋತ್ರಾ, ವಿದ್ಯುತ್‌ ವಿತರಣೆಯಲ್ಲಿ 3 ಲಕ್ಷಕ್ಕೂ ಅಧಿಕ ಮೊತ್ತದ ಸುಧಾರಣಾ ಕ್ರಮಗಳನ್ನು ಜಾರಿಗೆ ತಂದಿದ್ದರು. ತೆರಿಗೆ, ಪಬ್ಲಿಕ್‌ ಫೈನಾನ್ಸ್‌, ಇಂಧನ ವಲಯದ ಸುಧಾರಣೆ, ಆರ್ಥಿಕ ಆಡಳಿತದ ವಿಚಾರಗಳಲ್ಲಿ ಅವರಿಗೆ ತುಂಬಾ ಅನುಭವವಿದೆ.

ಈ ಹಿನ್ನಲೆಯಲ್ಲಿ ಡಿಸೆಂಬರ್‌.11ರಂದು ಸಂಜಯ್‌ ಮಲ್ಹೋತ್ರಾ ಅವರು, ಆರ್‌ಬಿಐ ನೂತನ ಗವರ್ನರ್‌ ಆಗಿ ತಮ್ಮ ಸೇವೆ ಸಲ್ಲಿಸಲಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

58 mins ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

2 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

2 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

3 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

3 hours ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

3 hours ago