ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ಗೆ ನೂತನ ಗವರ್ನರ್ ಆಗಿ ಕೇಂದ್ರ ಸಚಿವಾಲಯದ ಕಾರ್ಯದರ್ಶಿಯಾಗಿರುವ ಸಂಜಯ್ ಮಲ್ಹೋತ್ರಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸ್ತುತ ಗವರ್ನರ್ ಆಗಿರುವ ಶಕ್ತಿಕಾಂತ್ ದಾಸ್ ಅವರ ಸೇವಾವಧಿ ನಾಳೆಗೆ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್.11ರಂದು ಸಂಜಯ್ ಮಲ್ಹೋತ್ರಾ ಅವರು, ಆರ್ಬಿಐ ನೂತನ ಗವರ್ನರ್ ಆಗಿ ತಮ್ಮ ಕಾರ್ಯ ಆರಂಭಿಸಲಿದ್ದಾರೆ. ಮೂರು ವರ್ಷಗಳ ಕಾಲ ಅವರು ಅಧಿಕಾರದಲ್ಲಿರುತ್ತಾರೆ.
ಸಂಜಯ್ ಮಲ್ಹೋತ್ರಾ ಅವರು ರಾಜಸ್ಥಾನದ ಕೇಡರ್ನ 1990ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿದ್ದಾರೆ. ಐಐಟಿ ಕಾನ್ಪುರ್ನಲ್ಲಿ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ಮಾಡಿದ್ದು, ಅಮೇರಿಕಾದ ಪ್ರಿನ್ಸ್ಟನ್ ಯೂನಿವರ್ಸಿಟಿಯ ಆಫ್ ಪಬ್ಲಿಕ್ನಲ್ಲಿ ಸ್ನಾತಕೋತ್ತರ ವ್ಯಾಸಂಗ ಮುಗಿಸಿದ್ದಾರೆ.
ಈ ಹಿಂದೆ ಸರ್ಕಾರಿ ಸ್ವಾಮ್ಯದ ಆರ್ಇಸಿ ಛೇರ್ಮನ್ ಆಗಿ ಕಾರ್ಯ ನಿರ್ವಹಿಸಿದ್ದು, ಜಿಎಸ್ಟಿ ಮಂಡಳಿಯಲ್ಲೂ ಕೆಲಸ ಮಾಡಿದ್ದಾರೆ. ಇವರಿಗೆ ವಿದ್ಯುತ್, ತೆರಿಗೆ, ಹಣಕಾಸು, ಐಟಿ, ಗಣಿಗಳಲ್ಲಿ ಕೆಲಸ ಮಾಡಿದ ಅನುಭವವಿದೆ. ಸದ್ಯ ಹಣಕಾಸು ಸಚಿವಾಲಯದಲ್ಲಿ ರೆವೆನ್ಯೂ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ವಿದ್ಯುತ್ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿದ್ದ ಸಂಜಯ್ ಮಲ್ಹೋತ್ರಾ, ವಿದ್ಯುತ್ ವಿತರಣೆಯಲ್ಲಿ 3 ಲಕ್ಷಕ್ಕೂ ಅಧಿಕ ಮೊತ್ತದ ಸುಧಾರಣಾ ಕ್ರಮಗಳನ್ನು ಜಾರಿಗೆ ತಂದಿದ್ದರು. ತೆರಿಗೆ, ಪಬ್ಲಿಕ್ ಫೈನಾನ್ಸ್, ಇಂಧನ ವಲಯದ ಸುಧಾರಣೆ, ಆರ್ಥಿಕ ಆಡಳಿತದ ವಿಚಾರಗಳಲ್ಲಿ ಅವರಿಗೆ ತುಂಬಾ ಅನುಭವವಿದೆ.
ಈ ಹಿನ್ನಲೆಯಲ್ಲಿ ಡಿಸೆಂಬರ್.11ರಂದು ಸಂಜಯ್ ಮಲ್ಹೋತ್ರಾ ಅವರು, ಆರ್ಬಿಐ ನೂತನ ಗವರ್ನರ್ ಆಗಿ ತಮ್ಮ ಸೇವೆ ಸಲ್ಲಿಸಲಿದ್ದಾರೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…