ನವದೆಹಲಿ: ಪರಿಶಿಷ್ಟ ಜಾತಿ(ಎಸ್ಸಿ) ಸಮುದಾಯದಲ್ಲಿ ಒಳಮೀಸಲಾತಿ ನೀಡಲು ರಾಜ್ಯಗಳಿಗೆ ಸಾಂವಿಧಾನಿಕ ಅಧಿಕಾರವಿದೆ ಎಂಬ ತನ್ನ ತೀರ್ಪನ್ನು ಮರುಪರಿಶೀಸಲು ಸುಪ್ರೀಂ ಕೋರ್ಟ್ ಶುಕ್ರವಾರ(ಆ.4) ನಿರಾಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಬೇಲಾ ತ್ರಿವೇದಿ, ಮನೋಜ್ ಮೀಶ್ರಾ, ವಿಕ್ರಮ್ ನಾಥ್, ಪಂಕಜ್ ಮಿಥಾಲ್ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಏಳು ನ್ಯಾಯಾಧೀಶರ ಸಂವಿಧಾನ ಪೀಠವು, ತೀರ್ಪು ಮರು ಪರಿಶೀಲನೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ಎಸ್ಸಿ ಒಳಮೀಸಲಾತಿ ತೀರ್ಪು ಮರು ಪರಿಶೀಲನೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ಮೂಲ ಆದೇಶದಲ್ಲಿ ಲೋಪವಾಗಿದೆ ಎಂಬುದನ್ನು ತೋರಿಸುವಲ್ಲಿ ವಿಫಲವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಸುಪ್ರೀಂ ಕೋರ್ಟ್ ಕಳೆದ ಆಗಸ್ಟ್ 1 ರಂದು ಒಳಮೀಸಲಾತಿ ಸಂಬಂಧ ಮಹತ್ವ ತೀರ್ಪು ನೀಡಿ, ರಾಜ್ಯ ಸರ್ಕಾರಗಳಿಗೆ ಪರಿಶಿಷ್ಟ ಜಾತಿ ಸಮುದಾಯದಲ್ಲಿ ಹೆಚ್ಚು ಹಿಂದುಳಿದವರನ್ನು ಗುರುತಿಸಿ, ಶಿಕ್ಷಣ ಮತ್ತು ಉದ್ಯೋಗ ಮೀಸಲಾತಿಯಲ್ಲಿ ಪ್ರತ್ಯೇಕ ಕೋಟಾಗಳೊಂದಿಗೆ ಒಳ ಮೀಸಲಾತಿ ನೀಡಬಹುದು ಎಂದು ಹೇಳಿತ್ತು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…