ದೇಶ- ವಿದೇಶ

ಎಸ್‌ಸಿ ಒಳಮೀಸಲಾತಿ: ತೀರ್ಪು ಮರುಪರಿಶೀಲನೆ ಕೋರಿದ್ದ ಅರ್ಜಿ ವಜಾ

ನವದೆಹಲಿ: ಪರಿಶಿಷ್ಟ ಜಾತಿ(ಎಸ್‌ಸಿ) ಸಮುದಾಯದಲ್ಲಿ ಒಳಮೀಸಲಾತಿ ನೀಡಲು ರಾಜ್ಯಗಳಿಗೆ ಸಾಂವಿಧಾನಿಕ ಅಧಿಕಾರವಿದೆ ಎಂಬ ತನ್ನ ತೀರ್ಪನ್ನು ಮರುಪರಿಶೀಸಲು ಸುಪ್ರೀಂ ಕೋರ್ಟ್‌ ಶುಕ್ರವಾರ(ಆ.4) ನಿರಾಕರಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿಗಳಾದ ಬಿಆರ್‌ ಗವಾಯಿ, ಬೇಲಾ ತ್ರಿವೇದಿ, ಮನೋಜ್‌ ಮೀಶ್ರಾ, ವಿಕ್ರಮ್‌ ನಾಥ್‌, ಪಂಕಜ್‌ ಮಿಥಾಲ್‌ ಮತ್ತು ಸತೀಶ್‌ ಚಂದ್ರ ಶರ್ಮಾ ಅವರಿದ್ದ ಏಳು ನ್ಯಾಯಾಧೀಶರ ಸಂವಿಧಾನ ಪೀಠವು, ತೀರ್ಪು ಮರು ಪರಿಶೀಲನೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಎಸ್‌ಸಿ ಒಳಮೀಸಲಾತಿ ತೀರ್ಪು ಮರು ಪರಿಶೀಲನೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ಮೂಲ ಆದೇಶದಲ್ಲಿ ಲೋಪವಾಗಿದೆ ಎಂಬುದನ್ನು ತೋರಿಸುವಲ್ಲಿ ವಿಫಲವಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಸುಪ್ರೀಂ ಕೋರ್ಟ್‌ ಕಳೆದ ಆಗಸ್ಟ್‌ 1 ರಂದು ಒಳಮೀಸಲಾತಿ ಸಂಬಂಧ ಮಹತ್ವ ತೀರ್ಪು ನೀಡಿ, ರಾಜ್ಯ ಸರ್ಕಾರಗಳಿಗೆ ಪರಿಶಿಷ್ಟ ಜಾತಿ ಸಮುದಾಯದಲ್ಲಿ ಹೆಚ್ಚು ಹಿಂದುಳಿದವರನ್ನು ಗುರುತಿಸಿ, ಶಿಕ್ಷಣ ಮತ್ತು ಉದ್ಯೋಗ ಮೀಸಲಾತಿಯಲ್ಲಿ ಪ್ರತ್ಯೇಕ ಕೋಟಾಗಳೊಂದಿಗೆ ಒಳ ಮೀಸಲಾತಿ ನೀಡಬಹುದು ಎಂದು ಹೇಳಿತ್ತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು | ರಾತ್ರೋ ರಾತ್ರಿ ನವ ವಿವಾಹಿತೆ ನಾಪತ್ತೆ ; ದೂರು ದಾಖಲು

ಮೈಸೂರು : ಗಂಡನ ಮನೆಯಿಂದ ನವ ವಿವಾಹಿತೆ ರಾತ್ರೋ ರಾತ್ರಿ ನಾಪತ್ತೆಯಾಗಿರುವುದಾಗಿ ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

13 mins ago

ತಮಿಳುನಾಡು ನೂತನ ಸಿಎಂ ವಿಜಯ್‌ ಮುಂದಿವೆ ಬೆಟ್ಟದಂತಹ ಸವಾಲುಗಳು! ಮೆಟ್ಟಿ ನಿಲ್ಲುತ್ತಾರಾ ದಳಪತಿ?

ಚೆನ್ನೈ : ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ 60 ವರ್ಷಗಳ ದ್ರಾವಿಡ ಯುಗಕ್ಕೆ ತೆರೆ ಎಳೆದು, ಮೊದಲ ಬಾರಿಗೆ ಸಿನಿತಾರೆ-ರಾಜಕಾರಣಿ ಸಿ.ಜೋಸೆಫ್…

24 mins ago

ಹಣಕ್ಕಾಗಿ ವೃದ್ದೆ ಕೊಲೆ ; ಶವವನ್ನು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಕಿರಾತಕ

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…

2 days ago

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

2 days ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

2 days ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

2 days ago