ನವದೆಹಲಿ: ಪರಿಶಿಷ್ಟ ಜಾತಿ(ಎಸ್ಸಿ) ಸಮುದಾಯದಲ್ಲಿ ಒಳಮೀಸಲಾತಿ ನೀಡಲು ರಾಜ್ಯಗಳಿಗೆ ಸಾಂವಿಧಾನಿಕ ಅಧಿಕಾರವಿದೆ ಎಂಬ ತನ್ನ ತೀರ್ಪನ್ನು ಮರುಪರಿಶೀಸಲು ಸುಪ್ರೀಂ ಕೋರ್ಟ್ ಶುಕ್ರವಾರ(ಆ.4) ನಿರಾಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಬೇಲಾ ತ್ರಿವೇದಿ, ಮನೋಜ್ ಮೀಶ್ರಾ, ವಿಕ್ರಮ್ ನಾಥ್, ಪಂಕಜ್ ಮಿಥಾಲ್ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಏಳು ನ್ಯಾಯಾಧೀಶರ ಸಂವಿಧಾನ ಪೀಠವು, ತೀರ್ಪು ಮರು ಪರಿಶೀಲನೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ಎಸ್ಸಿ ಒಳಮೀಸಲಾತಿ ತೀರ್ಪು ಮರು ಪರಿಶೀಲನೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ಮೂಲ ಆದೇಶದಲ್ಲಿ ಲೋಪವಾಗಿದೆ ಎಂಬುದನ್ನು ತೋರಿಸುವಲ್ಲಿ ವಿಫಲವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಸುಪ್ರೀಂ ಕೋರ್ಟ್ ಕಳೆದ ಆಗಸ್ಟ್ 1 ರಂದು ಒಳಮೀಸಲಾತಿ ಸಂಬಂಧ ಮಹತ್ವ ತೀರ್ಪು ನೀಡಿ, ರಾಜ್ಯ ಸರ್ಕಾರಗಳಿಗೆ ಪರಿಶಿಷ್ಟ ಜಾತಿ ಸಮುದಾಯದಲ್ಲಿ ಹೆಚ್ಚು ಹಿಂದುಳಿದವರನ್ನು ಗುರುತಿಸಿ, ಶಿಕ್ಷಣ ಮತ್ತು ಉದ್ಯೋಗ ಮೀಸಲಾತಿಯಲ್ಲಿ ಪ್ರತ್ಯೇಕ ಕೋಟಾಗಳೊಂದಿಗೆ ಒಳ ಮೀಸಲಾತಿ ನೀಡಬಹುದು ಎಂದು ಹೇಳಿತ್ತು.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…