ನವದೆಹಲಿ: ಪರಿಶಿಷ್ಟ ಜಾತಿ(ಎಸ್ಸಿ) ಸಮುದಾಯದಲ್ಲಿ ಒಳಮೀಸಲಾತಿ ನೀಡಲು ರಾಜ್ಯಗಳಿಗೆ ಸಾಂವಿಧಾನಿಕ ಅಧಿಕಾರವಿದೆ ಎಂಬ ತನ್ನ ತೀರ್ಪನ್ನು ಮರುಪರಿಶೀಸಲು ಸುಪ್ರೀಂ ಕೋರ್ಟ್ ಶುಕ್ರವಾರ(ಆ.4) ನಿರಾಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಬೇಲಾ ತ್ರಿವೇದಿ, ಮನೋಜ್ ಮೀಶ್ರಾ, ವಿಕ್ರಮ್ ನಾಥ್, ಪಂಕಜ್ ಮಿಥಾಲ್ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಏಳು ನ್ಯಾಯಾಧೀಶರ ಸಂವಿಧಾನ ಪೀಠವು, ತೀರ್ಪು ಮರು ಪರಿಶೀಲನೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ಎಸ್ಸಿ ಒಳಮೀಸಲಾತಿ ತೀರ್ಪು ಮರು ಪರಿಶೀಲನೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ಮೂಲ ಆದೇಶದಲ್ಲಿ ಲೋಪವಾಗಿದೆ ಎಂಬುದನ್ನು ತೋರಿಸುವಲ್ಲಿ ವಿಫಲವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಸುಪ್ರೀಂ ಕೋರ್ಟ್ ಕಳೆದ ಆಗಸ್ಟ್ 1 ರಂದು ಒಳಮೀಸಲಾತಿ ಸಂಬಂಧ ಮಹತ್ವ ತೀರ್ಪು ನೀಡಿ, ರಾಜ್ಯ ಸರ್ಕಾರಗಳಿಗೆ ಪರಿಶಿಷ್ಟ ಜಾತಿ ಸಮುದಾಯದಲ್ಲಿ ಹೆಚ್ಚು ಹಿಂದುಳಿದವರನ್ನು ಗುರುತಿಸಿ, ಶಿಕ್ಷಣ ಮತ್ತು ಉದ್ಯೋಗ ಮೀಸಲಾತಿಯಲ್ಲಿ ಪ್ರತ್ಯೇಕ ಕೋಟಾಗಳೊಂದಿಗೆ ಒಳ ಮೀಸಲಾತಿ ನೀಡಬಹುದು ಎಂದು ಹೇಳಿತ್ತು.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…