ದೇಶ- ವಿದೇಶ

ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಸೂಚನೆ

ನವದೆಹಲಿ: 8 ರಿಂದ 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ರಾಜ್ಯ ಸರ್ಕಾರಕ್ಕೆ ಇಂದು ಸುಪ್ರೀಂಕೋರ್ಟ್‌ ಖಡಕ್‌ ಆದೇಶ ನೀಡಿದೆ.

ವಿವಿಧ ತರಗತಿಗಳಿಗೆ ಬೋರ್ಡ್‌ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಮಾರ್ಚ್‌.22ರಂದು ಹೈಕೋರ್ಟ್‌ ನೀಡಿದ ತೀರ್ಪಿನ ವಿರುದ್ಧ ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳ ಸಂಸ್ಥೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ವಿದ್ಯಾರ್ಥಿಗಳಿಗೆ ಯಾಕೆ ಕಿರುಕುಳ ನೀಡುತ್ತಿದ್ದೀರಿ? ನೀವು ಈ ರೀತಿ ವರ್ತಿಸಬಾರದು. ನಿಮಗೆ ನಿಜವಾಗಿಯೂ ವಿದ್ಯಾರ್ಥಿಗಳ ಹಿತದ ಬಗ್ಗೆ ಕಾಳಜಿಯಿದ್ದರೆ, ದಯವಿಟ್ಟು ಒಳ್ಳೆಯ ಶಾಲೆಗಳನ್ನು ತೆರೆಯಿರಿ.

ವಿದ್ಯಾರ್ಥಿಗಳ ಕತ್ತು ಹಿಸುಕುವ ಕೆಲಸ ಮಾಡಬೇಡಿ. ಪ್ರೌಢಶಾಲಾ ಶಿಕ್ಷಣ ಇಲಾಖೆಯಲ್ಲಿ ಕರ್ನಾಟಕ ಸರ್ಕಾರ ಅನುಸರಿಸುತ್ತಿರುವ ನೀತಿಯನ್ನು ದೇಶದ ಬೇರೆ ಯಾವುದೇ ರಾಜ್ಯಗಳು ಅನುಸರಿಸುತ್ತಿಲ್ಲ ಎಂದು ಆದೇಶ ನೀಡಿದೆ.

ಆಂದೋಲನ ಡೆಸ್ಕ್

Recent Posts

ಜನಮೆಚ್ಚಿದ್ದ ಆರ್ಕೆಸ್ಟ್ರಾ ; ಬದಲಾದ ಕ್ರೇಜ್

ಆರ್ಕೆಸ್ಟ್ರಾ. . . ಈ ಪದ ಕೇಳಿದರೆ ಸಾಕು, ಯುವಜನರ ಎದೆ ಯಲ್ಲಿ ತಮ್ಮ ಮೆಚ್ಚಿನ ಸಿನಿಮಾಗಳ ಹಾಡುಗಳ ಝೇಂಕಾರ,…

59 mins ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಮಾನವ್‌ ಸೋನಿ ಎಂಬ ಮಾನವೀಯ ಕಳಕಳಿಯ ಮನಸ್ಸು

ʼಫನ್‌ ಸ್ಮಾರ್ಟ್‌ ನಾಲೆಡ್ಜ್‌ ಸಲ್ಯೂಶನ್‌ ಫೌಂಡೇಶನ್‌ʼ ಮೂಲಕ ಮಾನವೀಯ ಸೇವೆ   ೨೬ ವರ್ಷ ಪ್ರಾಯದ, ಕೊಲ್ಕೊತ್ತಾದ ಮಾನವ್ ಸೋನಿ…

1 hour ago

ಮಹಪಂಚ್‌ ಕಾರ್ಟೂನ್‌

ಮಹಪಂಚ್‌ ಕಾರ್ಟೂನ್‌ |ಜುಲೈ 8 ಬುಧವಾರ  

4 hours ago

ಮಲೆನಾಡಿನಲ್ಲಿ ಮಳೆಯ ಅಬ್ಬರ: ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…

20 hours ago

ಕೊಡಗು ಜಿಲ್ಲೆಯ ಮಳೆ ವಿವರ

ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…

20 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…

21 hours ago