Mysore
33
few clouds

Social Media

ಮಂಗಳವಾರ, 24 ಮಾರ್ಚ್ 2026
Light
Dark

ಮತಾಂತರಗೊಂಡರೆ ಎಸ್‌.ಸಿ ಸ್ಥಾನಮಾನ ರದ್ದು: ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು

ನವದೆಹಲಿ: ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳಿಗೆ ಸೇರಿದ ವ್ಯಕ್ತಿಗಳು ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಪಡೆಯಬಹುದು. ಕ್ರಿಶ್ಚಿಯನ್ ಧರ್ಮದಂತಹ ಯಾವುದೇ ಇತರ ಧರ್ಮಕ್ಕೆ ಮತಾಂತರಗೊಂಡರೆ ಮತಾಂತರಗೊಂಡ ವ್ಯಕ್ತಿಯು ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾನೆ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ.

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ದಲಿತ ವ್ಯಕ್ತಿಯೊಬ್ಬರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ (ಎಸ್‍ಸಿ, ಎಸ್‍ಟಿ ಕಾಯ್ದೆ)ಯಡಿ ರಕ್ಷಣೆ ಕೇಳುವಂತಿಲ್ಲ ಎಂದು ನ್ಯಾಯಮೂರ್ತಿಗಳಾದ ಪಿ.ಕೆ .ಮಿಶ್ರಾ ಮತ್ತು ಮನಮೋಹನ್ ಅವರ ಪೀಠವು ತೀರ್ಪು ನೀಡಿದೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಪಿ. ಕೆ. ಮಿಶ್ರಾ ಮತ್ತು ಎನ್. ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು ಈ ತೀರ್ಪನ್ನು ನೀಡಿದ್ದು ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿ ಮತಾಂತರವಾದರೆ ಮೀಸಲಾತಿ ಇಲ್ಲ. ಎಸ್ ಸಿ ಸಮುದಾಯಕ್ಕೆ ಸಿಗುವ ಸೌಲಭ್ಯ ಮತ್ತು ಎಸ್ ಸಿ, ಎಸ್ ಟಿ ಕಾಯ್ದೆ ರಕ್ಷಣೆ ಸಿಗಲ್ಲ ಎಂದು ಸ್ಪಷ್ಟಪಡಿಸಿದೆ.

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಅನ್ಯ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯು ಪರಿಶಿಷ್ಟ ಜಾತಿಯ ಮೀಸಲಾತಿ ಸೌಲಭ್ಯಗಳನ್ನು ಪಡೆಯಲು ಅರ್ಹನಲ್ಲ. ಒಬ್ಬ ವ್ಯಕ್ತಿಯು ಕ್ರೈಸ್ತ ಧರ್ಮ ಅಥವಾ ಇತರ ಧರ್ಮಗಳಿಗೆ ಮತಾಂತರಗೊಂಡು ಅದನ್ನು ಅನುಸರಿಸುತ್ತಿದ್ದರೆ, ಅವರು ತಮ್ಮ ಪರಿಶಿಷ್ಟ ಜಾತಿಯ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ ಎಂದು ನ್ಯಾಯಪೀಠ ತಿಳಿಸಿದೆ.

Tags:
error: Content is protected !!