ದೇಶ- ವಿದೇಶ

ಭಾರತೀಯ ಮಹಿಳೆ ಧನ್ಯೆ, ಮನುಸ್ಮೃತಿಯಂತಹ ಗ್ರಂಥಗಳಿಂದ ಆಕೆಗೆ ಅತ್ಯಂತ ಗೌರವಾನ್ವಿತ ಸ್ಥಾನ: ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್

ನವದೆಹಲಿ; ಭಾರತೀಯ ಸಂಸ್ಕೃತಿ ಮತ್ತು ಮನುಸ್ಮೃತಿಯಂತಹ ಧರ್ಮಗ್ರಂಥಗಳು ಮಹಿಳೆಯರಿಗೆ ಅತ್ಯಂತ ಗೌರವಾನ್ವಿತ ಸ್ಥಾನವನ್ನು ನೀಡಿರುವುದರಿಂದ ಭಾರತೀಯ ಮಹಿಳೆಯರು ಧನ್ಯರು ಎಂದು ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್ ಹೇಳಿದ್ದಾರೆ.

ಅಗೋಚರ ಅಡೆತಡೆಗಳ ಮುಖಾಮುಖಿ: ವಿಜ್ಞಾನ, ತಂತ್ರಜ್ಞಾನ,

. ಉದ್ಯಮಶೀಲತೆ ಹಾಗೂ ಗಣಿತ ಕ್ಷೇತ್ರದಲ್ಲಿ ಮಹಿಳೆಯರು ಎದುರಿಸುತ್ತಿರುವ ಸವಾಲುಗಳ ಚರ್ಚೆ ಎಂಬ ವಿಷಯವಾಗಿ ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟ (ಎಫ್‌ಐಸಿಸಿಐ) ನವದೆಹಲಿಯಲ್ಲಿ ಏರ್ಪಡಿಸಿದ್ದ ಅಧಿವೇಶನ ಉದ್ಘಾಟಿಸಿ ಅವರು ಮಾತನಾಡಿದರು.

ಹೆಣ್ಣನ್ನು ಗೌರವಿಸದಿದ್ದಲ್ಲಿ ಪ್ರಾರ್ಥನೆಗೆ ಅರ್ಥವಿಲ್ಲ ಎಂದು ಮನುಸ್ಮೃತಿ ಸ್ವತಃ ಹೇಳುತ್ತದೆ. ನಮ್ಮ ಪೂರ್ವಜರು ಮತ್ತು ವೈದಿಕ ಗ್ರಂಥಗಳು ಮಹಿಳೆಯರನ್ನು ಹೇಗೆ ಗೌರವಿಸಬೇಕೆಂದು ಚೆನ್ನಾಗಿ ತಿಳಿದಿದ್ದವು ಎಂದು ನಾನು ಭಾವಿಸುತ್ತೇನೆ. ಏಷ್ಯಾದ ದೇಶಗಳು ಮಹಿಳೆಯರನ್ನು ಗೌರವಿಸುವಲ್ಲಿ ಉತ್ತಮವಾಗಿವೆ. ಮಹಿಳೆಯರು ನಾಯಕತ್ವ ವಹಿಸುವ ಕುರಿತಂತೆ ಭಾರತ ಹೆಚ್ಚು ಪ್ರಗತಿಪರವಾಗಿದೆ ಎಂದು ಅವರು ಹೇಳಿದರು.

ಉದ್ಯೋಗಸ್ಥ ಮಹಿಳೆಯರು ಕುಟುಂಬ ವ್ಯವಸ್ಥೆಯ ಮೂಲ ಮೌಲ್ಯಗಳನ್ನು ಬಲಪಡಿಸಲು ಮತ್ತು ತಮ್ಮ ವೃತ್ತಿಜೀವನಕ್ಕೆ ಬೆಂಬಲ ಪಡೆಯುವ ಸಲುವಾಗಿ ಅವಿಭಕ್ತ ಕುಟುಂಬಗಳಲ್ಲಿ ವಾಸಿಸಬೇಕು. ಅವಿಭಕ್ತ ಕುಟುಂಬಗಳಲ್ಲಿನ ಪುರುಷರು ವಯೋವೃದ್ಧರೂ, ಜ್ಞಾನವೃದ್ಧರೂ ಆಗಿರುವುದರಿಂದ ಮಹಿಳೆಯರಿಗೆ ಪ್ರೋತಾಹ ನೀಡುತ್ತಾರೆ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟರು.

ಕುಟುಂಬ ಮುನ್ನಡೆಸುವ ಒತ್ತಡ ಪುರುಷರು ಮತ್ತು ಮಹಿಳೆಯರದ್ದಾಗಿದ್ದು ಅವಿಭಕ್ತ ಕುಟುಂಬ ವ್ಯವಸ್ಥೆಯಲ್ಲಿ ಬದುಕಲು ಯುವತಿಯರು ತಮ್ಮನ್ನು ತಾವು ಹುರಿದುಂಬಿಸಿಕೊಳ್ಳಬೇಕು ಮತ್ತು ತಯಾರಿ ನಡೆಸಬೇಕು. ವಿಶೇಷವಾಗಿ ಉದ್ಯೋಗಸ್ಥ ಮಹಿಳೆಯರಿಗೆ ತಮ್ಮ ಉದ್ವೇಗವನ್ನು ಹೋಗಲಾಡಿಸಲು, ಸಮಸ್ಯೆ ಹಂಚಿಕೊಳ್ಳಲು ಹೆಚ್ಚು ಜನ ಬೇಕಿದ್ದು ಒತ್ತಡ ಸ್ವಲ್ಪಮಟ್ಟಿಗೆ ಕಡಿಮೆಯಾಗುತ್ತದೆ ಆದ್ದರಿಂದ ದೊಡ್ಡ ಕುಟುಂಬಗಳತ್ತ ಹೊರಳಬೇಕಿದೆ ಎಂದು ಅವರು ತಿಳಿಸಿದರು.

andolana

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

5 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

6 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

6 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

6 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

8 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

8 hours ago