ನವದೆಹಲಿ; ಭಾರತೀಯ ಸಂಸ್ಕೃತಿ ಮತ್ತು ಮನುಸ್ಮೃತಿಯಂತಹ ಧರ್ಮಗ್ರಂಥಗಳು ಮಹಿಳೆಯರಿಗೆ ಅತ್ಯಂತ ಗೌರವಾನ್ವಿತ ಸ್ಥಾನವನ್ನು ನೀಡಿರುವುದರಿಂದ ಭಾರತೀಯ ಮಹಿಳೆಯರು ಧನ್ಯರು ಎಂದು ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್ ಹೇಳಿದ್ದಾರೆ.
ಅಗೋಚರ ಅಡೆತಡೆಗಳ ಮುಖಾಮುಖಿ: ವಿಜ್ಞಾನ, ತಂತ್ರಜ್ಞಾನ,
. ಉದ್ಯಮಶೀಲತೆ ಹಾಗೂ ಗಣಿತ ಕ್ಷೇತ್ರದಲ್ಲಿ ಮಹಿಳೆಯರು ಎದುರಿಸುತ್ತಿರುವ ಸವಾಲುಗಳ ಚರ್ಚೆ ಎಂಬ ವಿಷಯವಾಗಿ ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟ (ಎಫ್ಐಸಿಸಿಐ) ನವದೆಹಲಿಯಲ್ಲಿ ಏರ್ಪಡಿಸಿದ್ದ ಅಧಿವೇಶನ ಉದ್ಘಾಟಿಸಿ ಅವರು ಮಾತನಾಡಿದರು.
ಹೆಣ್ಣನ್ನು ಗೌರವಿಸದಿದ್ದಲ್ಲಿ ಪ್ರಾರ್ಥನೆಗೆ ಅರ್ಥವಿಲ್ಲ ಎಂದು ಮನುಸ್ಮೃತಿ ಸ್ವತಃ ಹೇಳುತ್ತದೆ. ನಮ್ಮ ಪೂರ್ವಜರು ಮತ್ತು ವೈದಿಕ ಗ್ರಂಥಗಳು ಮಹಿಳೆಯರನ್ನು ಹೇಗೆ ಗೌರವಿಸಬೇಕೆಂದು ಚೆನ್ನಾಗಿ ತಿಳಿದಿದ್ದವು ಎಂದು ನಾನು ಭಾವಿಸುತ್ತೇನೆ. ಏಷ್ಯಾದ ದೇಶಗಳು ಮಹಿಳೆಯರನ್ನು ಗೌರವಿಸುವಲ್ಲಿ ಉತ್ತಮವಾಗಿವೆ. ಮಹಿಳೆಯರು ನಾಯಕತ್ವ ವಹಿಸುವ ಕುರಿತಂತೆ ಭಾರತ ಹೆಚ್ಚು ಪ್ರಗತಿಪರವಾಗಿದೆ ಎಂದು ಅವರು ಹೇಳಿದರು.
ಉದ್ಯೋಗಸ್ಥ ಮಹಿಳೆಯರು ಕುಟುಂಬ ವ್ಯವಸ್ಥೆಯ ಮೂಲ ಮೌಲ್ಯಗಳನ್ನು ಬಲಪಡಿಸಲು ಮತ್ತು ತಮ್ಮ ವೃತ್ತಿಜೀವನಕ್ಕೆ ಬೆಂಬಲ ಪಡೆಯುವ ಸಲುವಾಗಿ ಅವಿಭಕ್ತ ಕುಟುಂಬಗಳಲ್ಲಿ ವಾಸಿಸಬೇಕು. ಅವಿಭಕ್ತ ಕುಟುಂಬಗಳಲ್ಲಿನ ಪುರುಷರು ವಯೋವೃದ್ಧರೂ, ಜ್ಞಾನವೃದ್ಧರೂ ಆಗಿರುವುದರಿಂದ ಮಹಿಳೆಯರಿಗೆ ಪ್ರೋತಾಹ ನೀಡುತ್ತಾರೆ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟರು.
ಕುಟುಂಬ ಮುನ್ನಡೆಸುವ ಒತ್ತಡ ಪುರುಷರು ಮತ್ತು ಮಹಿಳೆಯರದ್ದಾಗಿದ್ದು ಅವಿಭಕ್ತ ಕುಟುಂಬ ವ್ಯವಸ್ಥೆಯಲ್ಲಿ ಬದುಕಲು ಯುವತಿಯರು ತಮ್ಮನ್ನು ತಾವು ಹುರಿದುಂಬಿಸಿಕೊಳ್ಳಬೇಕು ಮತ್ತು ತಯಾರಿ ನಡೆಸಬೇಕು. ವಿಶೇಷವಾಗಿ ಉದ್ಯೋಗಸ್ಥ ಮಹಿಳೆಯರಿಗೆ ತಮ್ಮ ಉದ್ವೇಗವನ್ನು ಹೋಗಲಾಡಿಸಲು, ಸಮಸ್ಯೆ ಹಂಚಿಕೊಳ್ಳಲು ಹೆಚ್ಚು ಜನ ಬೇಕಿದ್ದು ಒತ್ತಡ ಸ್ವಲ್ಪಮಟ್ಟಿಗೆ ಕಡಿಮೆಯಾಗುತ್ತದೆ ಆದ್ದರಿಂದ ದೊಡ್ಡ ಕುಟುಂಬಗಳತ್ತ ಹೊರಳಬೇಕಿದೆ ಎಂದು ಅವರು ತಿಳಿಸಿದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…