ದೇಶ- ವಿದೇಶ

ಅನಿಲ್‌ ಅಂಬಾನಿಗೆ ಸೆಬಿ ಶಾಕ್:‌ ಷೇರು ಮಾರುಕಟ್ಟೆಯಿಂದ 5 ವರ್ಷ ಬ್ಯಾನ್, 25 ಕೋಟಿ ದಂಡ

ಮುಂಬೈ: ಕೈಗಾರಿಕೋದ್ಯಮಿ ಅನಿಲ್‌ ಅಂಬಾನಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಆರ್‌ಎಚ್‌ಎಫ್‌ಎಲ್‌ ಹಣ ದುರುಪಯೋಗ ಪ್ರಕರಣದಲ್ಲಿ ಐದು ವರ್ಷ ಕಾಲ ಷೇರು ಮಾರುಕಟ್ಟೆಯಿಂದ ಅವರನ್ನು ನಿಷೇಧಿಸಲಾಗಿದೆ.

ಮಾರುಕಟ್ಟೆ ನಿಯಂತ್ರಕ ಸೆಬಿಯು ಈ ನಿರ್ಣಯ ಕೈಗೊಂಡಿದ್ದು, ನಿಷೇಧದ ಜೊತೆಗೆ 25 ಕೋಟೆ ದಂಡವನ್ನು ಸಹ ವಿಧಿಸಿದೆ. ಇನ್ನೂ ಇತರ ಅಧಿಕಾರಿಗಳಿಗೂ ಕೂಡ ಆರ್‌ಎಚ್‌ಎಫ್‌ಎಲ್‌ ಪ್ರಕರಣದಲ್ಲಿ ದಂಡ ವಿಧಿಸಿದೆ.

ರಿಲಯನ್ಸ್‌ ಹೋಮ್‌ ಫೈನಾನ್ಸ್‌ನ ಮಾಜಿ ಅಧ್ಯಕ್ಷ ಅನಿಲ್‌ ಅಂಬಾನಿ ಸೇರಿದಂತೆ ಒಟ್ಟು 24 ಉದ್ಯಮಿಗಳನ್ನು ಷೇರುಮಾರುಕಟ್ಟೆಯಿಂದ ನಿಷೇಧ ಮಾಡಲಾಗಿದೆ. ಅಲ್ಲದೇ ರಿಲಯನ್ಸ್‌ ಹೋಮ್‌ ಫೈನಾನ್ಸ್ ಅನ್ನು ಆರು ತಿಂಗಳ ಕಾಲ ನಿಷೇಧಿಸಲಾಗಿದ್ದು, ದಂಡವನ್ನು ಸಹ ವಿಧಿಸಲಾಗಿದೆ.

ಅನಿಲ್‌ ಅಂಬಾನಿ ಆರ್‌ಎಫ್‌ಎಫ್‌ಎಲ್‌ನ ಪ್ರಮುಖ ವ್ಯವಸ್ಥಾಪಕ ಸಿಬ್ಬಂದಿಗಳ ನೆರವಿನೊಂದಿಗೆ, ತನಗೆ ಸಂಬಂಧಿಸಿದ ಸಂಸ್ಥೆಗಳಿಗೆ ಸಾಲದ ನೆಪದಲ್ಲಿ ನೀಡಿರುವ ಹಣದಲ್ಲಿ ವಂಚಿಸಿದ್ದಾರೆ ಎಂದು ಸೆಬಿಯ ತನಿಖೆಯಿಂದ ತಿಳಿದು ಬಂದಿದೆ. ಈ ಕುರಿತು ಸೆಬಿಯು 222 ಪುಟಗಳ ಆದೇಶದಲ್ಲಿ ಅವ್ಯವಹಾರಗಳನ್ನು ವಿವರಿಸಿದೆ ಎಂದು ತಿಳಿದು ಬಂದಿದೆ.

ರಿಲಯನ್ಸ್‌ ಹೋಮ್‌ ಫೈನಾನ್ಸ್‌ ಸಂಸ್ಥೆವು ಸಾವಿರಾರು ಕೋಟಿ ರೂಪಾಯಿಗಳನ್ನ ಯಾವುದೇ ಅಡಮಾನ ಅಥವಾ ಸೆಕ್ಯೂರಿಟಿಯನ್ನಾಗಲೀ ಪಡೆಯದೆ ಜೊತೆಗ ಸಾಲ ತೀರಿಸಲು ಯಾವುದೇ ಪ್ರಮುಖ ಆದಾಯ ಇಲ್ಲದ ಸಣ್ಣ ಪುಟ್ಟ ಸಂಸ್ಥೆಗಳಿಗೂ ಕೂಡ ನಿಯಮ ಬಾಯಿರವಾಗಿ ಸಾಲ ಮಂಜೂರು ಮಾಡಲಾಗಿತ್ತು.

ಈ ವಹಿವಾಟಿನ ಹಿಂದಿನ ಉದ್ದೇಶಗಳ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿದ್ದು, ಆರ್‌ಎಚ್‌ಎಫ್‌ಎಲ್‌ ಗ್ರೂಪ್‌ ಮುಖ್ಯಸ್ಥರಾದ ಅನಿಲ್‌ ಅಂಬಾನಿ ನೇರವಾಗಿ ಪ್ರಭಾವ ಬೀರಿ ಈ ಸಾಲಗಳನ್ನು ಮಂಜೂರು ಮಾಡಿಸಿರುವುದು ಬೆಳಕಿಗೆ ಬಂದಿದೆ ಎಂದು ವರದಿಗಳಾಗಿವೆ.

ಇನ್ನು ಸೆಬಿಯು ಅನಿಲ್‌ ಅಂಬಾನಿಗೆ ಮಾತ್ರವಲ್ಲದೇ ಆರ್‌ಎಚ್‌ಎಫ್‌ಎಲ್‌ ಮಾಜಿ ಪ್ರಮುಖ ಅಧಿಕಾರಿಗಳಾದ ರವೀಂದ್ರ ಸುಧಾಲ್ಕರ್‌, ಅಮಿತ್‌ ಬಾಪ್ನಾ ಹಾಗೂ ಪಿಂಕೇಶ್‌ ಆರ್‌ ಷಾ ಸೇರಿದಂತೆ ಇತರ ಘಟಕಗಳಿದೆ ದಂಡ ವಿಧಿಸಿದೆ.

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಪಕ್ಕದ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯ ಪಕ್ಕದಲ್ಲಿರುವ ಮೋರಿಯೊಳಗೆ ಕಸದ…

18 mins ago

ಓದುಗರ ಪತ್ರ: ಬಸ್ ನಿರ್ವಾಹಕರು ಸೌಜನ್ಯದಿಂದ ವರ್ತಿಸಬೇಕು

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಇತ್ತೀಚೆಗೆ ನಿಗದಿತ ಸಂಖ್ಯೆಗಿಂತ ಹೆಚ್ಚು ಜನ ಪ್ರಯಾಣಿಸುತ್ತಿರುವುದು ಸರ್ವೇಸಾಮಾನ್ಯ ಆಗಿಬಿಟ್ಟಿದೆ. ಈ ಕಾರಣದಿಂದ…

19 mins ago

ಓದುಗರ ಪತ್ರ:  ಆಸ್ಪತ್ರೆ: ಭರವಸೆಗಿಂತಲೂ ಭಯವೇ ಜಾಸ್ತಿ

ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಜನರಿಗೆ ಆಸ್ಪತ್ರೆಗೆ ಹೋಗುವುದೆಂದರೆ ಜೀವ ಉಳಿಸಿಕೊಳ್ಳುವ ಭರವಸೆಗಿಂತ, ‘ಜೇಬಿಗೆಕತ್ತರಿ’ ಬೀಳುವ ಭೀತಿಯೇಹೆಚ್ಚಾಗಿದೆ. ದೇಶದಲ್ಲಿ ನಡೆಯುವ ಶಸ್ತ್ರಚಿಕಿತ್ಸೆಗಳಲ್ಲಿ…

21 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಜೈಲೇ ಮೊದಲ ಪಾಠ ಶಾಲೆ! ಕೊಲೆ ಆರೋಪಿಯೇ ಪ್ರಥಮ ಗುರು!

ಪಂಜು ಗಂಗೊಳ್ಳಿ ಜೈಲಿನ ಅನಕ್ಷರಸ್ಥ ಕೈದಿಗಳನ್ನು ಅಕ್ಷರಸ್ಥರನ್ನಾಗಿಸಲು ಮಹತ್ವದ ಯೋಜನೆ ರಾಜೇಶ್ ಕುಮಾರ್ ಯಾವತ್ತೂ ಶಾಲೆಯ ಮಟ್ಟಿಲು ಹತ್ತಿದವನಲ್ಲ. ಹಾಗಾಗಿ,…

42 mins ago

ನಾಳೆ ಶ್ರೀ ಅಯ್ಯಪ್ಪ ಕ್ಷೇತ್ರದ ಮುಖಮಂಟಪ ಲೋಕಾರ್ಪಣೆ

ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…

3 hours ago

‘ದೇಸಿ ಬೀಜಗಳನ್ನು ಉಳಿಸಿದರೆ ವಿಷಮುಕ್ತ ಆಹಾರ ನೀಡಲು ಸಾಧ್ಯ’

ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…

3 hours ago