ದೇಶ- ವಿದೇಶ

ಅನಿಲ್‌ ಅಂಬಾನಿಗೆ ಸೆಬಿ ಶಾಕ್:‌ ಷೇರು ಮಾರುಕಟ್ಟೆಯಿಂದ 5 ವರ್ಷ ಬ್ಯಾನ್, 25 ಕೋಟಿ ದಂಡ

ಮುಂಬೈ: ಕೈಗಾರಿಕೋದ್ಯಮಿ ಅನಿಲ್‌ ಅಂಬಾನಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಆರ್‌ಎಚ್‌ಎಫ್‌ಎಲ್‌ ಹಣ ದುರುಪಯೋಗ ಪ್ರಕರಣದಲ್ಲಿ ಐದು ವರ್ಷ ಕಾಲ ಷೇರು ಮಾರುಕಟ್ಟೆಯಿಂದ ಅವರನ್ನು ನಿಷೇಧಿಸಲಾಗಿದೆ.

ಮಾರುಕಟ್ಟೆ ನಿಯಂತ್ರಕ ಸೆಬಿಯು ಈ ನಿರ್ಣಯ ಕೈಗೊಂಡಿದ್ದು, ನಿಷೇಧದ ಜೊತೆಗೆ 25 ಕೋಟೆ ದಂಡವನ್ನು ಸಹ ವಿಧಿಸಿದೆ. ಇನ್ನೂ ಇತರ ಅಧಿಕಾರಿಗಳಿಗೂ ಕೂಡ ಆರ್‌ಎಚ್‌ಎಫ್‌ಎಲ್‌ ಪ್ರಕರಣದಲ್ಲಿ ದಂಡ ವಿಧಿಸಿದೆ.

ರಿಲಯನ್ಸ್‌ ಹೋಮ್‌ ಫೈನಾನ್ಸ್‌ನ ಮಾಜಿ ಅಧ್ಯಕ್ಷ ಅನಿಲ್‌ ಅಂಬಾನಿ ಸೇರಿದಂತೆ ಒಟ್ಟು 24 ಉದ್ಯಮಿಗಳನ್ನು ಷೇರುಮಾರುಕಟ್ಟೆಯಿಂದ ನಿಷೇಧ ಮಾಡಲಾಗಿದೆ. ಅಲ್ಲದೇ ರಿಲಯನ್ಸ್‌ ಹೋಮ್‌ ಫೈನಾನ್ಸ್ ಅನ್ನು ಆರು ತಿಂಗಳ ಕಾಲ ನಿಷೇಧಿಸಲಾಗಿದ್ದು, ದಂಡವನ್ನು ಸಹ ವಿಧಿಸಲಾಗಿದೆ.

ಅನಿಲ್‌ ಅಂಬಾನಿ ಆರ್‌ಎಫ್‌ಎಫ್‌ಎಲ್‌ನ ಪ್ರಮುಖ ವ್ಯವಸ್ಥಾಪಕ ಸಿಬ್ಬಂದಿಗಳ ನೆರವಿನೊಂದಿಗೆ, ತನಗೆ ಸಂಬಂಧಿಸಿದ ಸಂಸ್ಥೆಗಳಿಗೆ ಸಾಲದ ನೆಪದಲ್ಲಿ ನೀಡಿರುವ ಹಣದಲ್ಲಿ ವಂಚಿಸಿದ್ದಾರೆ ಎಂದು ಸೆಬಿಯ ತನಿಖೆಯಿಂದ ತಿಳಿದು ಬಂದಿದೆ. ಈ ಕುರಿತು ಸೆಬಿಯು 222 ಪುಟಗಳ ಆದೇಶದಲ್ಲಿ ಅವ್ಯವಹಾರಗಳನ್ನು ವಿವರಿಸಿದೆ ಎಂದು ತಿಳಿದು ಬಂದಿದೆ.

ರಿಲಯನ್ಸ್‌ ಹೋಮ್‌ ಫೈನಾನ್ಸ್‌ ಸಂಸ್ಥೆವು ಸಾವಿರಾರು ಕೋಟಿ ರೂಪಾಯಿಗಳನ್ನ ಯಾವುದೇ ಅಡಮಾನ ಅಥವಾ ಸೆಕ್ಯೂರಿಟಿಯನ್ನಾಗಲೀ ಪಡೆಯದೆ ಜೊತೆಗ ಸಾಲ ತೀರಿಸಲು ಯಾವುದೇ ಪ್ರಮುಖ ಆದಾಯ ಇಲ್ಲದ ಸಣ್ಣ ಪುಟ್ಟ ಸಂಸ್ಥೆಗಳಿಗೂ ಕೂಡ ನಿಯಮ ಬಾಯಿರವಾಗಿ ಸಾಲ ಮಂಜೂರು ಮಾಡಲಾಗಿತ್ತು.

ಈ ವಹಿವಾಟಿನ ಹಿಂದಿನ ಉದ್ದೇಶಗಳ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿದ್ದು, ಆರ್‌ಎಚ್‌ಎಫ್‌ಎಲ್‌ ಗ್ರೂಪ್‌ ಮುಖ್ಯಸ್ಥರಾದ ಅನಿಲ್‌ ಅಂಬಾನಿ ನೇರವಾಗಿ ಪ್ರಭಾವ ಬೀರಿ ಈ ಸಾಲಗಳನ್ನು ಮಂಜೂರು ಮಾಡಿಸಿರುವುದು ಬೆಳಕಿಗೆ ಬಂದಿದೆ ಎಂದು ವರದಿಗಳಾಗಿವೆ.

ಇನ್ನು ಸೆಬಿಯು ಅನಿಲ್‌ ಅಂಬಾನಿಗೆ ಮಾತ್ರವಲ್ಲದೇ ಆರ್‌ಎಚ್‌ಎಫ್‌ಎಲ್‌ ಮಾಜಿ ಪ್ರಮುಖ ಅಧಿಕಾರಿಗಳಾದ ರವೀಂದ್ರ ಸುಧಾಲ್ಕರ್‌, ಅಮಿತ್‌ ಬಾಪ್ನಾ ಹಾಗೂ ಪಿಂಕೇಶ್‌ ಆರ್‌ ಷಾ ಸೇರಿದಂತೆ ಇತರ ಘಟಕಗಳಿದೆ ದಂಡ ವಿಧಿಸಿದೆ.

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

8 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

8 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

10 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

10 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

10 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

18 hours ago