ಮುಂಬೈ: ಕೈಗಾರಿಕೋದ್ಯಮಿ ಅನಿಲ್ ಅಂಬಾನಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಆರ್ಎಚ್ಎಫ್ಎಲ್ ಹಣ ದುರುಪಯೋಗ ಪ್ರಕರಣದಲ್ಲಿ ಐದು ವರ್ಷ ಕಾಲ ಷೇರು ಮಾರುಕಟ್ಟೆಯಿಂದ ಅವರನ್ನು ನಿಷೇಧಿಸಲಾಗಿದೆ.
ಮಾರುಕಟ್ಟೆ ನಿಯಂತ್ರಕ ಸೆಬಿಯು ಈ ನಿರ್ಣಯ ಕೈಗೊಂಡಿದ್ದು, ನಿಷೇಧದ ಜೊತೆಗೆ 25 ಕೋಟೆ ದಂಡವನ್ನು ಸಹ ವಿಧಿಸಿದೆ. ಇನ್ನೂ ಇತರ ಅಧಿಕಾರಿಗಳಿಗೂ ಕೂಡ ಆರ್ಎಚ್ಎಫ್ಎಲ್ ಪ್ರಕರಣದಲ್ಲಿ ದಂಡ ವಿಧಿಸಿದೆ.
ರಿಲಯನ್ಸ್ ಹೋಮ್ ಫೈನಾನ್ಸ್ನ ಮಾಜಿ ಅಧ್ಯಕ್ಷ ಅನಿಲ್ ಅಂಬಾನಿ ಸೇರಿದಂತೆ ಒಟ್ಟು 24 ಉದ್ಯಮಿಗಳನ್ನು ಷೇರುಮಾರುಕಟ್ಟೆಯಿಂದ ನಿಷೇಧ ಮಾಡಲಾಗಿದೆ. ಅಲ್ಲದೇ ರಿಲಯನ್ಸ್ ಹೋಮ್ ಫೈನಾನ್ಸ್ ಅನ್ನು ಆರು ತಿಂಗಳ ಕಾಲ ನಿಷೇಧಿಸಲಾಗಿದ್ದು, ದಂಡವನ್ನು ಸಹ ವಿಧಿಸಲಾಗಿದೆ.
ಅನಿಲ್ ಅಂಬಾನಿ ಆರ್ಎಫ್ಎಫ್ಎಲ್ನ ಪ್ರಮುಖ ವ್ಯವಸ್ಥಾಪಕ ಸಿಬ್ಬಂದಿಗಳ ನೆರವಿನೊಂದಿಗೆ, ತನಗೆ ಸಂಬಂಧಿಸಿದ ಸಂಸ್ಥೆಗಳಿಗೆ ಸಾಲದ ನೆಪದಲ್ಲಿ ನೀಡಿರುವ ಹಣದಲ್ಲಿ ವಂಚಿಸಿದ್ದಾರೆ ಎಂದು ಸೆಬಿಯ ತನಿಖೆಯಿಂದ ತಿಳಿದು ಬಂದಿದೆ. ಈ ಕುರಿತು ಸೆಬಿಯು 222 ಪುಟಗಳ ಆದೇಶದಲ್ಲಿ ಅವ್ಯವಹಾರಗಳನ್ನು ವಿವರಿಸಿದೆ ಎಂದು ತಿಳಿದು ಬಂದಿದೆ.
ರಿಲಯನ್ಸ್ ಹೋಮ್ ಫೈನಾನ್ಸ್ ಸಂಸ್ಥೆವು ಸಾವಿರಾರು ಕೋಟಿ ರೂಪಾಯಿಗಳನ್ನ ಯಾವುದೇ ಅಡಮಾನ ಅಥವಾ ಸೆಕ್ಯೂರಿಟಿಯನ್ನಾಗಲೀ ಪಡೆಯದೆ ಜೊತೆಗ ಸಾಲ ತೀರಿಸಲು ಯಾವುದೇ ಪ್ರಮುಖ ಆದಾಯ ಇಲ್ಲದ ಸಣ್ಣ ಪುಟ್ಟ ಸಂಸ್ಥೆಗಳಿಗೂ ಕೂಡ ನಿಯಮ ಬಾಯಿರವಾಗಿ ಸಾಲ ಮಂಜೂರು ಮಾಡಲಾಗಿತ್ತು.
ಈ ವಹಿವಾಟಿನ ಹಿಂದಿನ ಉದ್ದೇಶಗಳ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿದ್ದು, ಆರ್ಎಚ್ಎಫ್ಎಲ್ ಗ್ರೂಪ್ ಮುಖ್ಯಸ್ಥರಾದ ಅನಿಲ್ ಅಂಬಾನಿ ನೇರವಾಗಿ ಪ್ರಭಾವ ಬೀರಿ ಈ ಸಾಲಗಳನ್ನು ಮಂಜೂರು ಮಾಡಿಸಿರುವುದು ಬೆಳಕಿಗೆ ಬಂದಿದೆ ಎಂದು ವರದಿಗಳಾಗಿವೆ.
ಇನ್ನು ಸೆಬಿಯು ಅನಿಲ್ ಅಂಬಾನಿಗೆ ಮಾತ್ರವಲ್ಲದೇ ಆರ್ಎಚ್ಎಫ್ಎಲ್ ಮಾಜಿ ಪ್ರಮುಖ ಅಧಿಕಾರಿಗಳಾದ ರವೀಂದ್ರ ಸುಧಾಲ್ಕರ್, ಅಮಿತ್ ಬಾಪ್ನಾ ಹಾಗೂ ಪಿಂಕೇಶ್ ಆರ್ ಷಾ ಸೇರಿದಂತೆ ಇತರ ಘಟಕಗಳಿದೆ ದಂಡ ವಿಧಿಸಿದೆ.
ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…