ದೇಶ- ವಿದೇಶ

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಸಾರ್ವಕಾಲಿಕ ದಾಖಲೆ

ಮುಂಬೈ: ಇಂದು ಭಾರತೀಯ ಷೇರು ಮಾರುಕಟ್ಟೆ ಸಾರ್ವಕಾಲಿಕ ದಾಖಲೆ ನಿರ್ಮಿಸಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಸೆನ್ಸೆಕ್ಸ್‌ 79 ಸಾವಿರ ಗಡಿದಾಟಿದರೆ, ನಿಫ್ಟಿ ಕೂಡ 24 ಸಾವಿರ ಗಡಿ ದಾಟಿದೆ.

ಬಾಂಬೆ ಷೇರು ಮಾರುಕಟ್ಟೆಯಲ್ಲಿ ಗೂಳಿ ನೆಗೆತ ಮುಂದುವರಿದಿದ್ದು, ನಿನ್ನೆ 78,053,52 ಅಂಕಗಳ ದಾಖಲೆಯ ಮಟ್ಟಕ್ಕೆ ತಲುಪಿದ್ದ ಸೆನ್ಸೆಕ್ಸ್‌ ಇಂದು 79 ಸಾವಿರ ಗಡಿದಾಟಿದರೆ, ನಿಫ್ಟಿ ಕೂಡ 24 ಸಾವಿರ ಗಡಿ ದಾಟಿದ್ದು, ಹೊಸ ದಾಖಲೆ ಬರೆದಿದೆ.

ಇಂದಿನ ವಹಿವಾಟಿನಲ್ಲಿ ರಿಲಯನ್ಸ್‌ ಇಂಡಸ್ಟ್ರೀಸ್‌ನ ಬ್ಲೂ ಚಿಪ್‌ ಮತ್ತು ಐಸಿಐಸಿಐಯ ಷೇರು ಖರೀದಿಯೊಂದಿಗೆ 30 ಷೇರುಗಳ ಬಿಎಸ್‌ಇ ಸೆನ್ಸೆಕ್ಸ್‌ 339.51 ಪಾಯಿಂಟ್ಸ್‌ ಏರಿಕೆ ಕಂಡು 79,013,76ಕ್ಕೆ ತಲುಪಿದೆ.

ಅದೇ ರೀತಿ ನಿಫ್ಟಿ ಕೂಡ 97.6 ಪಾಯಿಂಟ್‌ ಏರಿಕೆ ಕಂಡು ಸಾರ್ವಕಾಲಿಕ ಗರಿಷ್ಠ 24 ಸಾವಿರ ಗಡಿ ದಾಟಿದೆ. ಇಂದಿನ ವಹಿವಾಟು ಅಂತ್ಯಕ್ಕೆ ಸೆನ್ಸೆಕ್ಸ್‌ 568.93 ಅಂಕಗಳ ಸೇರ್ಪಡೆಯೊಂದಿಗೆ 79,243.18 ಅಂಕಗಳಿಗೆ ಏರಿಕೆಯಾದರೆ, ನಿಫ್ಟಿ 175.70 ಅಂಕಗಳ ಸೇರ್ಪಡೆಯೊಂದಿಗೆ 24,044.50 ಅಂಕಗಳಿಗೆ ಏರಿಕೆಯಾಗಿದೆ.

ಅಲ್ಟ್ರಾಟೆಕ್‌ ಸಿಮೆಂಟ್‌, ಜೆಎಸ್‌ಡಬ್ಲ್ಯೂ ಸ್ಟೀಲ್‌, ರಿಲಯನ್ಸ್‌ ಇಂಡಸ್ಟ್ರೀಸ್‌, ಆಕ್ಸಿಸ್‌ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌, ಬಜಾಜ್‌ ಪೈನಾನ್ಸ್‌, ಕೋಟಕ್‌ ಮಹೀಂದ್ರಾ ಬ್ಯಾಂಕ್‌ ಮತ್ತು ಟಾಟಾ ಸ್ಟೀಲ್‌ ಅತೀ ಹೆಚ್ಚು ಲಾಭ ಗಳಿಸಿದರೆ, ಮಾರುತಿ, ಟೆಕ್‌ ಮಹೀಂದ್ರಾ, ಎಚ್‌ಸಿಎಲ್‌ ಟೆಕ್ನಾಲಜೀಸ್‌ ಮತ್ತು ಲಾರ್ಸನ್‌ ಅಂಡ್‌ ಟೂಬ್ರೊ ಅತೀ ಹೆಚ್ಚು ನಷ್ಟ ಅನುಭವಿಸಿವೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶ

ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…

2 hours ago

ಮಹಾಭಾರತ: ಹೊಸ ಅರ್ಥ ಕಟ್ಟಲು ಯತ್ನಿಸಿದ ರಾಮು

ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…

2 hours ago

ಹಾಡು-ಪಾಡುವಿನ ರಾಮು ರಾಜ್ಯ

ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…

2 hours ago

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

15 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

16 hours ago