ದೇಶ- ವಿದೇಶ

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಸಾರ್ವಕಾಲಿಕ ದಾಖಲೆ

ಮುಂಬೈ: ಇಂದು ಭಾರತೀಯ ಷೇರು ಮಾರುಕಟ್ಟೆ ಸಾರ್ವಕಾಲಿಕ ದಾಖಲೆ ನಿರ್ಮಿಸಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಸೆನ್ಸೆಕ್ಸ್‌ 79 ಸಾವಿರ ಗಡಿದಾಟಿದರೆ, ನಿಫ್ಟಿ ಕೂಡ 24 ಸಾವಿರ ಗಡಿ ದಾಟಿದೆ.

ಬಾಂಬೆ ಷೇರು ಮಾರುಕಟ್ಟೆಯಲ್ಲಿ ಗೂಳಿ ನೆಗೆತ ಮುಂದುವರಿದಿದ್ದು, ನಿನ್ನೆ 78,053,52 ಅಂಕಗಳ ದಾಖಲೆಯ ಮಟ್ಟಕ್ಕೆ ತಲುಪಿದ್ದ ಸೆನ್ಸೆಕ್ಸ್‌ ಇಂದು 79 ಸಾವಿರ ಗಡಿದಾಟಿದರೆ, ನಿಫ್ಟಿ ಕೂಡ 24 ಸಾವಿರ ಗಡಿ ದಾಟಿದ್ದು, ಹೊಸ ದಾಖಲೆ ಬರೆದಿದೆ.

ಇಂದಿನ ವಹಿವಾಟಿನಲ್ಲಿ ರಿಲಯನ್ಸ್‌ ಇಂಡಸ್ಟ್ರೀಸ್‌ನ ಬ್ಲೂ ಚಿಪ್‌ ಮತ್ತು ಐಸಿಐಸಿಐಯ ಷೇರು ಖರೀದಿಯೊಂದಿಗೆ 30 ಷೇರುಗಳ ಬಿಎಸ್‌ಇ ಸೆನ್ಸೆಕ್ಸ್‌ 339.51 ಪಾಯಿಂಟ್ಸ್‌ ಏರಿಕೆ ಕಂಡು 79,013,76ಕ್ಕೆ ತಲುಪಿದೆ.

ಅದೇ ರೀತಿ ನಿಫ್ಟಿ ಕೂಡ 97.6 ಪಾಯಿಂಟ್‌ ಏರಿಕೆ ಕಂಡು ಸಾರ್ವಕಾಲಿಕ ಗರಿಷ್ಠ 24 ಸಾವಿರ ಗಡಿ ದಾಟಿದೆ. ಇಂದಿನ ವಹಿವಾಟು ಅಂತ್ಯಕ್ಕೆ ಸೆನ್ಸೆಕ್ಸ್‌ 568.93 ಅಂಕಗಳ ಸೇರ್ಪಡೆಯೊಂದಿಗೆ 79,243.18 ಅಂಕಗಳಿಗೆ ಏರಿಕೆಯಾದರೆ, ನಿಫ್ಟಿ 175.70 ಅಂಕಗಳ ಸೇರ್ಪಡೆಯೊಂದಿಗೆ 24,044.50 ಅಂಕಗಳಿಗೆ ಏರಿಕೆಯಾಗಿದೆ.

ಅಲ್ಟ್ರಾಟೆಕ್‌ ಸಿಮೆಂಟ್‌, ಜೆಎಸ್‌ಡಬ್ಲ್ಯೂ ಸ್ಟೀಲ್‌, ರಿಲಯನ್ಸ್‌ ಇಂಡಸ್ಟ್ರೀಸ್‌, ಆಕ್ಸಿಸ್‌ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌, ಬಜಾಜ್‌ ಪೈನಾನ್ಸ್‌, ಕೋಟಕ್‌ ಮಹೀಂದ್ರಾ ಬ್ಯಾಂಕ್‌ ಮತ್ತು ಟಾಟಾ ಸ್ಟೀಲ್‌ ಅತೀ ಹೆಚ್ಚು ಲಾಭ ಗಳಿಸಿದರೆ, ಮಾರುತಿ, ಟೆಕ್‌ ಮಹೀಂದ್ರಾ, ಎಚ್‌ಸಿಎಲ್‌ ಟೆಕ್ನಾಲಜೀಸ್‌ ಮತ್ತು ಲಾರ್ಸನ್‌ ಅಂಡ್‌ ಟೂಬ್ರೊ ಅತೀ ಹೆಚ್ಚು ನಷ್ಟ ಅನುಭವಿಸಿವೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

10 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

10 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

11 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

11 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

11 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

11 hours ago